‘ಹೊಸ ವೈರಾಣು ಹರಡಿದ ಕುರಿತು ಕೇಂದ್ರ ಸರ್ಕಾರ ಅಥವಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಯಾವುದೇ ಸೂಚನೆ ಬಂದಿಲ್ಲ. ಅಲ್ಲಿ ಸಾಂಕ್ರಾಮಿಕ ದೊಡ್ಡ ಪ್ರಮಾಣದಲ್ಲಿ ಹರಡಿದರೂ ಭಯ ಪಡಬೇಕಿಲ್ಲ. ರಾಜ್ಯದ ಎಲ್ಲೆಡೆ ಐಸಿಯು ಬೆಡ್, ವೆಂಟಿಲೇಟರ್ ಸೇರಿದಂತೆ ಎಲ್ಲವನ್ನೂ ಸಿದ್ಧಪಡಿಸಿಕೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.