ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚೀನಾದಲ್ಲಿ ಹೊಸ ವೈರಾಣು: ಪರಿಸ್ಥಿತಿ ನಿಭಾಯಿಸಲು ಸಿದ್ಧ- ದಿನೇಶ್‌ ಗುಂಡೂರಾವ್‌

Published 5 ಡಿಸೆಂಬರ್ 2023, 15:27 IST
Last Updated 5 ಡಿಸೆಂಬರ್ 2023, 15:27 IST
ಅಕ್ಷರ ಗಾತ್ರ

ಬೆಳಗಾವಿ: ‘ಚೀನಾದಲ್ಲಿ ಹರಡಿರುವ ಹೊಸ ವೈರಾಣು ಬಗ್ಗೆ ಭಯ ಪಡಬೇಕಿಲ್ಲ. ರಾಜ್ಯದಲ್ಲಿ ಅಂಥ ಪ್ರಕರಣ ಕಂಡುಬಂದಿಲ್ಲ. ಈ ಸಂಬಂಧ ಆರೋಗ್ಯ ಇಲಾಖೆ ಮತ್ತು ತಜ್ಞರ ಸಭೆ ಕೂಡ ನಡೆಸಿದ್ದೇವೆ. ಎಚ್ಚರಿಕೆ ವಹಿಸಿದ್ದೇವೆ’ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

‘ಹೊಸ ವೈರಾಣು ಹರಡಿದ ಕುರಿತು ಕೇಂದ್ರ ಸರ್ಕಾರ ಅಥವಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಯಾವುದೇ ಸೂಚನೆ ಬಂದಿಲ್ಲ. ಅಲ್ಲಿ ಸಾಂಕ್ರಾಮಿಕ ದೊಡ್ಡ ಪ್ರಮಾಣದಲ್ಲಿ ಹರಡಿದರೂ ಭಯ ಪಡಬೇಕಿಲ್ಲ. ರಾಜ್ಯದ ಎಲ್ಲೆಡೆ ಐಸಿಯು ಬೆಡ್‌, ವೆಂಟಿಲೇಟರ್‌ ಸೇರಿದಂತೆ ಎಲ್ಲವನ್ನೂ ಸಿದ್ಧಪಡಿಸಿಕೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT