‘ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳುವ ದೃಷ್ಟಿಯಿಂದ ಈ ನಿರ್ಬಂಧ ವಿಧಿಸಲಾಗಿದೆ. ಸಂಘ-ಸಂಸ್ಥೆಗಳವರು ಒಂದು ವೇಳೆ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲು ಬಯಸಿದರೆ ಅಂತಹ ಸಾಮಗ್ರಿಗಳನ್ನು ಮಹಾನಗರ ಪಾಲಿಕೆಗೆ ತಲುಪಿಸಬೇಕು. ಹೀಗೆ ಸಂಗ್ರಹವಾಗುವ ಆಹಾರಧಾನ್ಯ ಅಥವಾ ಸಿದ್ಧಪಡಿಸಿದ ಆಹಾರವನ್ನು ಪಾಲಿಕೆಯ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಹಂಚಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.