ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ಬಿಲ್ ಪಾವತಿ: ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ

Last Updated 28 ಮೇ 2021, 14:54 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ 2020-21ನೇ ಹಂಗಾಮಿಗೆ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಬಾಕಿ ಬಿಲ್‌ ಅನ್ನು ತಕ್ಷಣವೇ ಪಾವತಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಶುಕ್ರವಾರ ಪ್ರಕಟಣೆ ನೀಡಿರುವ ಅವರು, ‘ಕಬ್ಬು ನಿಯಂತ್ರಣ ಅಧಿನಿಯಮ-1966ರಂತೆ ಕಬ್ಬು ಸರಬರಾಜು ಮಾಡಿದ 14 ದಿನದೊಗೆ ಮೊತ್ತ ಪಾವತಿಸಬೇಕೆಂಬ ನಿಯಮವಿದೆ. ಆದರೆ, ಸಕ್ಕರೆ ಆಯುಕ್ತರು ಬಿಡುಗಡೆ ಮಾಡಿರುವ ವರದಿ ಪ್ರಕಾರ ಇನ್ನೂ ಕೆಲವು ಕಾರ್ಖಾನೆಯವರು ಶೇ 90ಕ್ಕಿಂತ ಕಡಿಮೆ ಮೊತ್ತ ಪಾವತಿಸಿರುವುದು ತಿಳಿದುಬಂದಿದೆ. ಆದ್ದರಿಂದ ಬಾಕಿ ಉಳಿದಿರುವ ಬಿಲ್‌ ಅನ್ನು ಮಾಸಾಂತ್ಯದೊಳಗೆ ಪಾವತಿಸಬೇಕು’ ಎಂದು ತಾಕೀತು ಮಾಡಿದ್ದಾರೆ.

‘ಬಾಕಿ‌ ಬಿಲ್ ಪಾವತಿಸಿದ ಬಳಿಕ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ವರದಿ ಸಲ್ಲಿಸಬೇಕು. ಒಂದು ವೇಳೆ ವರದಿ ಸಲ್ಲಿಸಲು ತಪ್ಪಿದ್ದಲ್ಲಿ ಕಬ್ಬು ನಿಯಂತ್ರಣ ಅಧಿನಿಯಮ-1966ರಲ್ಲಿ ಶಿಸ್ತು ಕ್ರಮ ಜರುಗಿಸಲು ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರಿಗೆ ಶಿಪಾರಸು ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT