‘ಮುಂಗಾರು ಪ್ರಾರಂಭವಾಗುತ್ತಿರುವ ಈ ಸಂದರ್ಭದಲ್ಲಿ ರೈತರಿಗೂ ನೆರವು ನೀಡಲಾಗಿದೆ. ರೈತರು ಹಾಗೂ ಸ್ವಸಹಾಯ ಸಂಘಗಳ, ಸೊಸೈಟಿ ಸಾಲ, ಭೂ ಅಭಿವೃದ್ಧಿ ಬ್ಯಾಂಕ್ ಮೂಲಕ ಪಡೆದ ಸಾಲಗಳ ಮರುಪಾವತಿ ದಿನಾಂಕವನ್ನು ಜುಲೈ ಅಂತ್ಯದವರೆಗೆ ವಿಸ್ತರಣೆ ಮಾಡುವ ಮೂಲಕ ಮುಖ್ಯಮಂತ್ರಿಯು ಮತ್ತೊಮ್ಮೆ ರೈತರಿಗೆ ಆಸರೆಯಾಗಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಎದೆಗುಂದದೆ ಸರ್ವ ಶ್ರಮಿಕ ವರ್ಗಕ್ಕೆ ಆರ್ಥಿಕ ನೆರವು ನೀಡಿದ ಅವರ ನಡೆಯು, ಟೀಕಿಸುವುದನ್ನೇ ಮೈಗೂಡಿಸಿಕೊಂಡ ವಿರೋಧ ಪಕ್ಷದವರಿಗೆ ಹತಾಶ ಭಾವನೆ ಕಾಡುವಂತೆ ಮಾಡಿದೆ’ ಎಂದು ಹೇಳಿದ್ದಾರೆ.