<p><strong>ಬೆಳಗಾವಿ:</strong> 'ಪ್ರಕೃತಿ ವಿಕೋಪ ಪರಿಹಾರ (ಎನ್.ಡಿ.ಆರ್.ಎಫ್) ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿಲ್ಲ. ಬಿಜೆಪಿಯವರಿಗೆ ಕಾಮಾಲೆ ರೋಗ ಅಂಟಿಕೊಂಡಿದೆ. ವಿನಾಕಾರಣ ಆರೋಪ ಮಾಡುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ವಿಪಕ್ಷದ ನಾಯಕ ಆರ್.ಅಶೋಕ ಅವರ ಮಾತಿಗೆ ಅರ್ಥವಿಲ್ಲ. ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗಿದ್ದರಿಂದ ಅವರಿಗೆ ತಳಮಳ ಶುರುವಾಗಿದೆ' ಎಂದರು.</p><p>'ಪ್ರಧಾನಿ ಮೋದಿ ಆದಿಯಾಗಿ ಎಲ್ಲ ಬಿಜೆಪಿಗರೂ ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಈಗ ನಮ್ಮದೇ ಗ್ಯಾರಂಟಿ ಯೋಜನೆಗಳ ಉಪಾಯವನ್ನು ಬಿಜೆಪಿ ಸರ್ಕಾರಗಳು ಕಾಪಿ ಮಾಡುತ್ತಿವೆ. ಹರಿಯಾಣ, ದೆಹಲಿ, ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ಅನುಕರಣೆ ಮಾಡುತ್ತಿದ್ದಾರೆ' ಎಂದರು.</p><p>'ಮುಂದೆಯೂ ನಾನೇ ಸಿ.ಎಂ ಎನ್ನುವ ಮೂಲಕ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ಗೆ ಸೆಡ್ಡು ಹೊಡೆದಿದ್ದಾರೆ' ಎಂಬ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 'ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳಲು ಸಿ.ಟಿ.ರವಿ ಯಾರು? ಅವರೇನು ನಮ್ಮ ಹೈಕಮಾಂಡೇ' ಎಂದು ಮರುಪ್ರಶ್ನಿಸಿದರು.</p><p>ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, 'ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ವಹಣೆಯನ್ನು ಖಾಸಗಿಯವರಿಗೆ ಕೊಟ್ಟಿಲ್ಲ. ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯರು ಉಚಿತವಾಗಿ ಸೇವೆ ನೀಡಲಿದ್ದಾರೆ. ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದೆವು. ಈ ವೇಳೆ 11 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇನ್ನುಳಿದ ಖಾಲಿ ಇರುವ ಹುದ್ದೆಗಳು ತುಂಬುವವರೆಗೆ ಕೆಎಲ್ಒ ಸಂಸ್ಥೆಯವರು ತಾತ್ಕಾಲಿಕವಾಗಿ ಸಹಾಯ ಮಾಡುತ್ತಿದ್ದಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> 'ಪ್ರಕೃತಿ ವಿಕೋಪ ಪರಿಹಾರ (ಎನ್.ಡಿ.ಆರ್.ಎಫ್) ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿಲ್ಲ. ಬಿಜೆಪಿಯವರಿಗೆ ಕಾಮಾಲೆ ರೋಗ ಅಂಟಿಕೊಂಡಿದೆ. ವಿನಾಕಾರಣ ಆರೋಪ ಮಾಡುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ವಿಪಕ್ಷದ ನಾಯಕ ಆರ್.ಅಶೋಕ ಅವರ ಮಾತಿಗೆ ಅರ್ಥವಿಲ್ಲ. ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗಿದ್ದರಿಂದ ಅವರಿಗೆ ತಳಮಳ ಶುರುವಾಗಿದೆ' ಎಂದರು.</p><p>'ಪ್ರಧಾನಿ ಮೋದಿ ಆದಿಯಾಗಿ ಎಲ್ಲ ಬಿಜೆಪಿಗರೂ ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಈಗ ನಮ್ಮದೇ ಗ್ಯಾರಂಟಿ ಯೋಜನೆಗಳ ಉಪಾಯವನ್ನು ಬಿಜೆಪಿ ಸರ್ಕಾರಗಳು ಕಾಪಿ ಮಾಡುತ್ತಿವೆ. ಹರಿಯಾಣ, ದೆಹಲಿ, ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ಅನುಕರಣೆ ಮಾಡುತ್ತಿದ್ದಾರೆ' ಎಂದರು.</p><p>'ಮುಂದೆಯೂ ನಾನೇ ಸಿ.ಎಂ ಎನ್ನುವ ಮೂಲಕ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ಗೆ ಸೆಡ್ಡು ಹೊಡೆದಿದ್ದಾರೆ' ಎಂಬ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 'ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳಲು ಸಿ.ಟಿ.ರವಿ ಯಾರು? ಅವರೇನು ನಮ್ಮ ಹೈಕಮಾಂಡೇ' ಎಂದು ಮರುಪ್ರಶ್ನಿಸಿದರು.</p><p>ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, 'ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ವಹಣೆಯನ್ನು ಖಾಸಗಿಯವರಿಗೆ ಕೊಟ್ಟಿಲ್ಲ. ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯರು ಉಚಿತವಾಗಿ ಸೇವೆ ನೀಡಲಿದ್ದಾರೆ. ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದೆವು. ಈ ವೇಳೆ 11 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇನ್ನುಳಿದ ಖಾಲಿ ಇರುವ ಹುದ್ದೆಗಳು ತುಂಬುವವರೆಗೆ ಕೆಎಲ್ಒ ಸಂಸ್ಥೆಯವರು ತಾತ್ಕಾಲಿಕವಾಗಿ ಸಹಾಯ ಮಾಡುತ್ತಿದ್ದಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>