ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಗೋಕಾಕ ಗ್ರಾಮೀಣ ಪಿಎಸ್ಐ ಎನ್.ಆರ್.ಖಿಲಾರಿ, ‘ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಫ್ಲೆಕ್ಸ್ ಹರಿದುಹಾಕಿದ್ದಾನೆ ಎಂಬ ಸಂಶಯವಿದೆ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಡದೆ ಶಾಂತಿ ಕಾಪಾಡಲು ಸಹಕರಿಸಬೇಕು’ ಎಂದರು.