<p><strong>ಹುಕ್ಕೇರಿ</strong>: ‘ಜೀವನದಲ್ಲಿ ಕಷ್ಟ ಬರುವುದು ಸಹಜ. ಜನರು ಭಯಪಡದೆ ಜೀವನ ಸಾಗಿಸಬೇಕು. ಸರ್ಕಾರ ಮಂಜೂರು ಮಾಡಿದ ಧನಸಹಾಯದಿಂದ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿ ಬದುಕು ರೂಪಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಸರ್ಕಾರ ಮಂಜೂರು ಮಾಡಿದ ಧನಸಹಾಯದ ಚೆಕ್ ವಿತರಿಸಿ ಅವರು ಮಾತನಾಡಿದರು.</p>.<p>ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ತಾಲ್ಲೂಕಿನ ಮಾವನೂರ ಗ್ರಾಮದ ರೈತ ಕೆಂಪಣ್ಣ ಗುಡಗನಟ್ಟಿ, ಅರ್ಜುನವಾಡದ ರೈತ ಮಹಿಳೆ ಸಿದ್ದವ್ವ ಕರಿಸಿದ್ದ ದಡ್ಡಿ (45) ಅವರ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು.</p>.<p>ತಹಶೀಲ್ದಾರ್ ಮಂಜುಳಾ ನಾಯಕ, ಸಹಾಯಕ ಕೃಷಿ ನಿರ್ದೇಶಕ ಆರ್.ಬಿ. ನಾಯ್ಕರ್, ಪುರಸಭೆ ಅಧ್ಯಕ್ಷ ಇಮ್ರಾನ್ ಮೊಮೀನ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಹಾಂತೇಶ ಮಗದುಮ್ಮ, ಆಪ್ತ ಸಹಾಯಕ ಪ್ರಕಾಶ ಬಸ್ಸಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ‘ಜೀವನದಲ್ಲಿ ಕಷ್ಟ ಬರುವುದು ಸಹಜ. ಜನರು ಭಯಪಡದೆ ಜೀವನ ಸಾಗಿಸಬೇಕು. ಸರ್ಕಾರ ಮಂಜೂರು ಮಾಡಿದ ಧನಸಹಾಯದಿಂದ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿ ಬದುಕು ರೂಪಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಸರ್ಕಾರ ಮಂಜೂರು ಮಾಡಿದ ಧನಸಹಾಯದ ಚೆಕ್ ವಿತರಿಸಿ ಅವರು ಮಾತನಾಡಿದರು.</p>.<p>ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ತಾಲ್ಲೂಕಿನ ಮಾವನೂರ ಗ್ರಾಮದ ರೈತ ಕೆಂಪಣ್ಣ ಗುಡಗನಟ್ಟಿ, ಅರ್ಜುನವಾಡದ ರೈತ ಮಹಿಳೆ ಸಿದ್ದವ್ವ ಕರಿಸಿದ್ದ ದಡ್ಡಿ (45) ಅವರ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು.</p>.<p>ತಹಶೀಲ್ದಾರ್ ಮಂಜುಳಾ ನಾಯಕ, ಸಹಾಯಕ ಕೃಷಿ ನಿರ್ದೇಶಕ ಆರ್.ಬಿ. ನಾಯ್ಕರ್, ಪುರಸಭೆ ಅಧ್ಯಕ್ಷ ಇಮ್ರಾನ್ ಮೊಮೀನ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಹಾಂತೇಶ ಮಗದುಮ್ಮ, ಆಪ್ತ ಸಹಾಯಕ ಪ್ರಕಾಶ ಬಸ್ಸಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>