<p><strong>ಬೆಳಗಾವಿ: </strong>ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿಕೊಳ್ಳದ ಕಾರಣಕ್ಕೆ ಗರ್ಭಿಣಿಯೊಬ್ಬರು ಮತ್ತು ಕುಟುಂಬದವರು ಪರದಾಡಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.</p>.<p>ಮಹಿಳೆಗೆ ಪ್ರಸವ ವೇದನೆ ಕಾಣಿಸಿಕೊಂಡಿತ್ತು. ಹೆರಿಗೆಗಾಗಿ ಕುಟುಂಬದವರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ‘ಈ ಆಸ್ಪತ್ರೆಯಲ್ಲಿ ಕೋವಿಡ್–19 ಸೋಂಕಿತರಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತದೆ. ಇತರ ರೋಗಿಗಳನ್ನು ದಾಖಲಿಸಿಕೊಳ್ಳುವುದಿಲ್ಲ. ಸರ್ಕಾರದಿಂದಲೇ ಈ ಸೂಚನೆ ಇದೆ’ ಎಂದು ಅಲ್ಲಿನ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಎಷ್ಟೇ ಮನವಿ ಮಾಡಿದರೂ ಸಿಬ್ಬಂದಿಯಿಂದ ಸ್ಪಂದನೆ ಸಿಗಲಿಲ್ಲ ಮತ್ತು ಆಸ್ಪತ್ರೆಗೆ ದಾಖಲಿಸಿಕೊಳ್ಳಲಿಲ್ಲ ಎಂದು ತಿಳಿದುಬಂದಿದೆ.</p>.<p>ಇದೇ ಆಸ್ಪತ್ರೆಯಲ್ಲಿ ಖಾಸಗಿ ಅಂಬ್ಯುಲೆನ್ಸ್ ಸೇವೆ ಒದಗಿಸುತ್ತಿರುವ ಕರವೇ ಮುಖಂಡ ಗಣೇಶ ರೋಕಡೆ ಅವರು ವಿಷಯ ತಿಳಿದು ನೆರವಿಗೆ ಧಾವಿಸಿದ್ದಾರೆ. ಖಾಸಗಿ ಆಸ್ಪತ್ರೆ ಸಂಪರ್ಕಿಸಿ, ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟು ಅಲ್ಲಿಗೆ ದಾಖಲಿಸಿದ್ದಾರೆ. ಮಹಿಳೆಗೆ ಅಗತ್ಯವಿದ್ದ ರಕ್ತ ದಾನವನ್ನೂ ಮಾಡಿದ್ದಾರೆ. ಆ ಮಹಿಳೆ ಮಧ್ಯರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಇಡೀ ಕುಟುಂಬಕ್ಕೆ ನೆರವಾಗಿದ್ದಾರೆ. ಸಹಾಯಹಸ್ತ ಚಾಚಿದ ಹಾಗೂ ಸಮಯಪ್ರಜ್ಞೆ ಮೆರೆದ ಗಣೇಶ ಅವರನ್ನು ಆಸ್ಪತ್ರೆಯವರು ಶನಿವಾರ ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿಕೊಳ್ಳದ ಕಾರಣಕ್ಕೆ ಗರ್ಭಿಣಿಯೊಬ್ಬರು ಮತ್ತು ಕುಟುಂಬದವರು ಪರದಾಡಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.</p>.<p>ಮಹಿಳೆಗೆ ಪ್ರಸವ ವೇದನೆ ಕಾಣಿಸಿಕೊಂಡಿತ್ತು. ಹೆರಿಗೆಗಾಗಿ ಕುಟುಂಬದವರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ‘ಈ ಆಸ್ಪತ್ರೆಯಲ್ಲಿ ಕೋವಿಡ್–19 ಸೋಂಕಿತರಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತದೆ. ಇತರ ರೋಗಿಗಳನ್ನು ದಾಖಲಿಸಿಕೊಳ್ಳುವುದಿಲ್ಲ. ಸರ್ಕಾರದಿಂದಲೇ ಈ ಸೂಚನೆ ಇದೆ’ ಎಂದು ಅಲ್ಲಿನ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಎಷ್ಟೇ ಮನವಿ ಮಾಡಿದರೂ ಸಿಬ್ಬಂದಿಯಿಂದ ಸ್ಪಂದನೆ ಸಿಗಲಿಲ್ಲ ಮತ್ತು ಆಸ್ಪತ್ರೆಗೆ ದಾಖಲಿಸಿಕೊಳ್ಳಲಿಲ್ಲ ಎಂದು ತಿಳಿದುಬಂದಿದೆ.</p>.<p>ಇದೇ ಆಸ್ಪತ್ರೆಯಲ್ಲಿ ಖಾಸಗಿ ಅಂಬ್ಯುಲೆನ್ಸ್ ಸೇವೆ ಒದಗಿಸುತ್ತಿರುವ ಕರವೇ ಮುಖಂಡ ಗಣೇಶ ರೋಕಡೆ ಅವರು ವಿಷಯ ತಿಳಿದು ನೆರವಿಗೆ ಧಾವಿಸಿದ್ದಾರೆ. ಖಾಸಗಿ ಆಸ್ಪತ್ರೆ ಸಂಪರ್ಕಿಸಿ, ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟು ಅಲ್ಲಿಗೆ ದಾಖಲಿಸಿದ್ದಾರೆ. ಮಹಿಳೆಗೆ ಅಗತ್ಯವಿದ್ದ ರಕ್ತ ದಾನವನ್ನೂ ಮಾಡಿದ್ದಾರೆ. ಆ ಮಹಿಳೆ ಮಧ್ಯರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಇಡೀ ಕುಟುಂಬಕ್ಕೆ ನೆರವಾಗಿದ್ದಾರೆ. ಸಹಾಯಹಸ್ತ ಚಾಚಿದ ಹಾಗೂ ಸಮಯಪ್ರಜ್ಞೆ ಮೆರೆದ ಗಣೇಶ ಅವರನ್ನು ಆಸ್ಪತ್ರೆಯವರು ಶನಿವಾರ ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>