ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳೆ ಈಗ ನಮ್ಮೊಂದಿಗಿಲ್ಲ: ಡಿಕೆಶಿ

ಅವರ‍್ಯಾವ ದೊಡ್ಡ ಸಾಹುಕಾರ?: ಚುನಾವಣೆ ವೇಳೆ ನೆಂಟಸ್ತಿಕೆ ಬೇಡ
Last Updated 29 ನವೆಂಬರ್ 2021, 18:47 IST
ಅಕ್ಷರ ಗಾತ್ರ

ಬೆಳಗಾವಿ: ‘ಕೊಳೆ ಈಗ ನಮ್ಮೊಂದಿಗಿಲ್ಲ. ದೂರ ಹೋಗಿದೆ. ಅಂಥವರನ್ನು ಇಟ್ಟುಕೊಂಡಿದ್ದರೆ ಕಷ್ಟ ಆಗುತ್ತಿತ್ತು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದರು.

ಸೋಮವಾರ ನಡೆದ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಾಂಗ್ರೆಸ್ ನಾಯಕ ಭರಮಗೌಡ (ರಾಜು) ಕಾಗೆ ಮನೆಗೆ ರಮೇಶ ಜಾರಕಿಹೋಳಿ ಭೇಟಿ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ‘ಬೇರೆ ಪಕ್ಷದವರನ್ನು ಪಕ್ಷದ ನಾಯಕರು ಮನೆಗೆ ಸೇರಿಸಬಾರದು’ ಎಂದೂ ಹೇಳಿದರು.

‘ಬೆಳಗಾವಿ ಚುನಾವಣೆಯನ್ನು ಇಡೀ ರಾಜ್ಯ ನೋಡುತ್ತಿದೆ. ಕಳೆದ ಚುನಾವಣೆಯಲ್ಲಿ ನಾವು ಶಿಸ್ತುಕ್ರಮ ವಹಿಸಲಿಲ್ಲ. ಹೀಗಾಗಿ ಈಗ ತೊಂದರೆ ಅನುಭವಿಸುತ್ತಿದ್ದೇವೆ’ ಎಂದರು.

ಅವರ‍್ಯಾವ ದೊಡ್ಡ ಸಾಹುಕಾರ?:‘ನಮ್ಮ ನಾಯಕರು ಬಿಜೆಪಿಯವರ ಜೊತೆ ಏಕೆ ನೆಂಟಸ್ತಿಕೆ ಇಟ್ಟುಕೊಂಡಿದ್ದೀರಿ? ಮನೆಗೆ ಸೇರಿಸುತ್ತಿದ್ದೀರೇಕೆ, ವಾಹನ ಕಳುಹಿಸಿದರೆಂದು ಹೋಗುತ್ತೀರೇಕೆ? ಅವರ‍್ಯಾವ ಡೊಡ್ಡ ಸಾಹುಕಾರ? ನೆಂಟಸ್ತನ ಅಥವಾ ವಿಶ್ವಾಸವನ್ನು ಚುನಾವಣೆ ವೇಳೆ ಇಟ್ಟುಕೊಳ್ಳಬೇಡಿ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT