<p><strong>ಚಿಕ್ಕೋಡಿ (ಬೆಳಗಾವಿ ಜಿಲ್ಲೆ):</strong> ‘ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ನಿರ್ದಿಷ್ಟ ತೀರ್ಮಾನ ಕೈಗೊಳ್ಳಲು ದೆಹಲಿಯಲ್ಲಿ ನಮ್ಮ ರಾಜ್ಯದ ಎಲ್ಲ ಸಂಸದರ ಸಭೆ ಕರೆಯಲು ತೀರ್ಮಾನಿಸಿದ್ದೇವೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p><p>ತಾಲ್ಲೂಕಿನ ಯಡೂರು ಗ್ರಾಮದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಉತ್ತರ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಆಸಕ್ತಿ ತೋರಿದೆ. ಕೃಷ್ಣ ಮೇಲ್ದಂಡೆ ಯೋಜನೆಗೆ ಬೇಕಾದ ಭೂಸ್ವಾಧೀನಕ್ಕಾಗಿ ₹70 ಸಾವಿರ ಕೋಟಿ ನೀಡಲು ನಿರ್ಧಾರ ಮಾಡಿದ್ದೇವೆ. ಇದೇನು ಸಣ್ಣ ತೀರ್ಮಾಣವಲ್ಲ. ಈಗ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಬೇಕು. ಯೋಜನೆ ವಿರೊಧಿಸಿ ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಿಂದ ನಡೆಯುತ್ತಿರವ ಗದಾಪ್ರಹಾರ ತಡೆಯಬೇಕು’ ಎಂದರು.</p><p>‘ಬಿ.ವೈ.ವಿಜಯೇಂದ್ರ ನಮ್ಮ ಸರ್ಕಾರವನ್ನು ನಾಲಾಯಕ್ ಸರ್ಕಾರ ಎಂದು ಟೀಕಿಸಿದ್ದಾರೆ. ಪಾಪ ಅವರಿಗೆ ಗೊತ್ತಿಲ್ಲ; ಹಿಂದೆ ಅವರ ನಾಲಾಯಕ್ ಸರ್ಕಾರ ಇದ್ದ ಕಾರಣಕ್ಕೇ ಈಗ ಜನ ಲಾಯಕ್ ಸರ್ಕಾರ ತಂದಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ‘ಕೆಪಿಎಸ್ಸಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದು, ಇದರ ತನಿಖೆ ಮಾಡಿಸುತ್ತೇವೆ’ ಎಂದರು.</p><p>‘ಪ್ರಧಾನಿ ಮೋದಿ ಅವರಿಗೆ ವಿದೇಶಾಂಗ ನೀತಿಗಳು ಅರ್ಥವಾಗುತ್ತಿಲ್ಲ. ಇದೇ ಕಾರಣಕ್ಕೆ ರೂಪಾಯಿ ಬೆಲೆ ದಾಖಲೆ ಪ್ರಮಾಣದಲ್ಲಿ ಕುಸಿಯುತ್ತಿದೆ. ಮೇಲಾಗಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ ಹಾಗೆ ಕುಣಿಯುತ್ತಿದ್ದಾರೆ. ಟ್ರಂಪ್ ಈಗ ಬೇರೆ ದೇಶದ ನಾಯಕರನ್ನು ಅಪಹರಿಸುವುದು, ಹತ್ಯೆ ಮಾಡುವುದು ನಡೆಸಿದ್ದಾರೆ. ಇಂದಲ್ಲ ನಾಳೆ ನಮ್ಮ ದೇಶಕ್ಕೂ ಹೀಗೇ ಮಾಡಿದರೆ ಸುಮ್ಮನಿರಬೇಕೇ? ಯುದ್ಧದಿಂದ ಅಪಾಯಕರು ಸಾಯುತ್ತಾರೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಸದ್ಯ ನಡೆದ ಜಾಗತಿಕ ಮಟ್ಟದ ಯುದ್ಧಗಳು ರಾಜ್ಯದ ಕೈಗಾರಿಕಾ ವಲಯದ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ, ಉದ್ಯಮಿಗಳ ಜತೆಗೆ ನಿರಂತರ ಸಭೆ ನಡೆಸಿದ್ದೇನೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ (ಬೆಳಗಾವಿ ಜಿಲ್ಲೆ):</strong> ‘ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ನಿರ್ದಿಷ್ಟ ತೀರ್ಮಾನ ಕೈಗೊಳ್ಳಲು ದೆಹಲಿಯಲ್ಲಿ ನಮ್ಮ ರಾಜ್ಯದ ಎಲ್ಲ ಸಂಸದರ ಸಭೆ ಕರೆಯಲು ತೀರ್ಮಾನಿಸಿದ್ದೇವೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p><p>ತಾಲ್ಲೂಕಿನ ಯಡೂರು ಗ್ರಾಮದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಉತ್ತರ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಆಸಕ್ತಿ ತೋರಿದೆ. ಕೃಷ್ಣ ಮೇಲ್ದಂಡೆ ಯೋಜನೆಗೆ ಬೇಕಾದ ಭೂಸ್ವಾಧೀನಕ್ಕಾಗಿ ₹70 ಸಾವಿರ ಕೋಟಿ ನೀಡಲು ನಿರ್ಧಾರ ಮಾಡಿದ್ದೇವೆ. ಇದೇನು ಸಣ್ಣ ತೀರ್ಮಾಣವಲ್ಲ. ಈಗ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಬೇಕು. ಯೋಜನೆ ವಿರೊಧಿಸಿ ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಿಂದ ನಡೆಯುತ್ತಿರವ ಗದಾಪ್ರಹಾರ ತಡೆಯಬೇಕು’ ಎಂದರು.</p><p>‘ಬಿ.ವೈ.ವಿಜಯೇಂದ್ರ ನಮ್ಮ ಸರ್ಕಾರವನ್ನು ನಾಲಾಯಕ್ ಸರ್ಕಾರ ಎಂದು ಟೀಕಿಸಿದ್ದಾರೆ. ಪಾಪ ಅವರಿಗೆ ಗೊತ್ತಿಲ್ಲ; ಹಿಂದೆ ಅವರ ನಾಲಾಯಕ್ ಸರ್ಕಾರ ಇದ್ದ ಕಾರಣಕ್ಕೇ ಈಗ ಜನ ಲಾಯಕ್ ಸರ್ಕಾರ ತಂದಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ‘ಕೆಪಿಎಸ್ಸಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದು, ಇದರ ತನಿಖೆ ಮಾಡಿಸುತ್ತೇವೆ’ ಎಂದರು.</p><p>‘ಪ್ರಧಾನಿ ಮೋದಿ ಅವರಿಗೆ ವಿದೇಶಾಂಗ ನೀತಿಗಳು ಅರ್ಥವಾಗುತ್ತಿಲ್ಲ. ಇದೇ ಕಾರಣಕ್ಕೆ ರೂಪಾಯಿ ಬೆಲೆ ದಾಖಲೆ ಪ್ರಮಾಣದಲ್ಲಿ ಕುಸಿಯುತ್ತಿದೆ. ಮೇಲಾಗಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ ಹಾಗೆ ಕುಣಿಯುತ್ತಿದ್ದಾರೆ. ಟ್ರಂಪ್ ಈಗ ಬೇರೆ ದೇಶದ ನಾಯಕರನ್ನು ಅಪಹರಿಸುವುದು, ಹತ್ಯೆ ಮಾಡುವುದು ನಡೆಸಿದ್ದಾರೆ. ಇಂದಲ್ಲ ನಾಳೆ ನಮ್ಮ ದೇಶಕ್ಕೂ ಹೀಗೇ ಮಾಡಿದರೆ ಸುಮ್ಮನಿರಬೇಕೇ? ಯುದ್ಧದಿಂದ ಅಪಾಯಕರು ಸಾಯುತ್ತಾರೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಸದ್ಯ ನಡೆದ ಜಾಗತಿಕ ಮಟ್ಟದ ಯುದ್ಧಗಳು ರಾಜ್ಯದ ಕೈಗಾರಿಕಾ ವಲಯದ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ, ಉದ್ಯಮಿಗಳ ಜತೆಗೆ ನಿರಂತರ ಸಭೆ ನಡೆಸಿದ್ದೇನೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>