<p><strong>ಬೆಳಗಾವಿ:</strong> ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿರುವುದು ಮುಟ್ಟಾಳ ಹೇಳಿಕೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದರು.</p>.<p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಜನರ ದಿಕ್ಕು ತಪ್ಪಿಸುವ ಹೇಳಿಕೆಯನ್ನು ಅವರು ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಕಾಂಗ್ರೆಸ್ನಲ್ಲಿ ಹೇಗೆ ಬದುಕಬೇಕು ಎಂದು ಅವರಿಗೆ ಗೊತ್ತಾಗುತ್ತಿಲ್ಲ. ಹೀಗಾಗಿ ದಿನಕ್ಕೊಂದು ಇಂತಹ ಹೇಳಿಕೆ ನೀಡುತ್ತಿದ್ದಾರೆ' ಎಂದು ಟೀಕಿಸಿದರು.</p>.<p>'ಏನೇ ಆರೋಪ ಮಾಡಿದರೂ ಅದಕ್ಕೆ ದಾಖಲೆಗಳು ಬೇಕು. ಸುಮ್ಮನೆ ಆರೋಪ ಮಾಡಬಾರದು. ಸಂತೋಷ್ ಬಳಿ ವಿಡಿಯೊ ಇರುವುದು ಗೊತ್ತಾಗಿದ್ದರೆ ಮೊದಲೇ ಯಾಕೆ ಹೇಳಲಿಲ್ಲ. ಸಂತೋಷ ಆತ್ಮಹತ್ಯೆ ಯತ್ನ ತಡೆಯಬಹುದಿತ್ತು. ಸಾಯಲಿ ಅಂತ ಕಾಯುತ್ತಿದ್ದಾರಾ?'.'ಈ ರೀತಿಯ ಕೆಟ್ಟ ರಾಜಕಾರಣ ಮಾಡಬಾರದು. ವಿಡಿಯೊ ಇದ್ದರೆ ಬಿಡುಗಡೆ ಮಾಡಲಿ' ಎಂದು ಸವಾಲು ಹಾಕಿದರು.</p>.<p>ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ವಿಡಿಯೊವೊಂದು ಕಾರಣ ಎಂದು ಡಿ.ಕೆ. ಶಿವಕುಮಾರ್ ಕಾರವಾರದಲ್ಲಿ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿರುವುದು ಮುಟ್ಟಾಳ ಹೇಳಿಕೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದರು.</p>.<p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಜನರ ದಿಕ್ಕು ತಪ್ಪಿಸುವ ಹೇಳಿಕೆಯನ್ನು ಅವರು ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಕಾಂಗ್ರೆಸ್ನಲ್ಲಿ ಹೇಗೆ ಬದುಕಬೇಕು ಎಂದು ಅವರಿಗೆ ಗೊತ್ತಾಗುತ್ತಿಲ್ಲ. ಹೀಗಾಗಿ ದಿನಕ್ಕೊಂದು ಇಂತಹ ಹೇಳಿಕೆ ನೀಡುತ್ತಿದ್ದಾರೆ' ಎಂದು ಟೀಕಿಸಿದರು.</p>.<p>'ಏನೇ ಆರೋಪ ಮಾಡಿದರೂ ಅದಕ್ಕೆ ದಾಖಲೆಗಳು ಬೇಕು. ಸುಮ್ಮನೆ ಆರೋಪ ಮಾಡಬಾರದು. ಸಂತೋಷ್ ಬಳಿ ವಿಡಿಯೊ ಇರುವುದು ಗೊತ್ತಾಗಿದ್ದರೆ ಮೊದಲೇ ಯಾಕೆ ಹೇಳಲಿಲ್ಲ. ಸಂತೋಷ ಆತ್ಮಹತ್ಯೆ ಯತ್ನ ತಡೆಯಬಹುದಿತ್ತು. ಸಾಯಲಿ ಅಂತ ಕಾಯುತ್ತಿದ್ದಾರಾ?'.'ಈ ರೀತಿಯ ಕೆಟ್ಟ ರಾಜಕಾರಣ ಮಾಡಬಾರದು. ವಿಡಿಯೊ ಇದ್ದರೆ ಬಿಡುಗಡೆ ಮಾಡಲಿ' ಎಂದು ಸವಾಲು ಹಾಕಿದರು.</p>.<p>ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ವಿಡಿಯೊವೊಂದು ಕಾರಣ ಎಂದು ಡಿ.ಕೆ. ಶಿವಕುಮಾರ್ ಕಾರವಾರದಲ್ಲಿ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>