<p><strong>ಬೆಳಗಾವಿ:</strong> ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದ್ದು, ಇಲ್ಲಿನ ಮಾರುತಿ ನಗರದಲ್ಲಿ ಎರಡು ವರ್ಷ ಮಗುವಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ. </p><p>ಗಂಭೀರವಾಗಿ ಗಾಯಗೊಂಡ ಆರಾಧ್ಯ ತರಗಾರ(2) ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾಳೆ. </p><p>‘ಮಹಾನಗರ ಪಾಲಿಕೆ ಮತ್ತು ಸದಸ್ಯ ಅಜೀಮ್ ಪಟವೇಗಾರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ. ಆರಾಧ್ಯಳ ಹೆತ್ತವರು ಅಂಗವಿಕಲರಿದ್ದು, ಬಡ ಕುಟುಂಬವಿದೆ. ಚಿಕಿತ್ಸೆಗೆ ತಗುಲುವ ವೆಚ್ಚವನ್ನೆಲ್ಲ ಪಾಲಿಕೆ ವತಿಯಿಂದಲೇ ಭರಿಸಬೇಕು’ ಎಂದು ಆರಾಧ್ಯಾಳ ಸಂಬಂಧಿ ಸತೀಶ ತರಗಾರ ಒತ್ತಾಯಿಸಿದ್ದಾರೆ.</p><p>‘ಮಾರುತಿ ನಗರದಲ್ಲಿ ನಮ್ಮ ಕುಟುಂಬದ ಎರಡು ಮನೆಗಳಿವೆ. ಒಂದು ಮನೆಯಿಂದ ಮತ್ತೊಂದು ಮನೆಗೆ ಬಾಲಕಿ ಬರುವಾಗ ಬೀದಿನಾಯಿ ಕಚ್ಚಿ ಗಾಯಗೊಳಿಸಿದೆ’ ಎಂದು ಹೇಳಿದ್ದಾರೆ.</p><p>ಪ್ರತಿಕ್ರಿಯೆಗಾಗಿ ಮಹಾನಗರ ಪಾಲಿಕೆ ಆಯುಕ್ತೆ ಬಿ.ಶುಭ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದರೂ ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದ್ದು, ಇಲ್ಲಿನ ಮಾರುತಿ ನಗರದಲ್ಲಿ ಎರಡು ವರ್ಷ ಮಗುವಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ. </p><p>ಗಂಭೀರವಾಗಿ ಗಾಯಗೊಂಡ ಆರಾಧ್ಯ ತರಗಾರ(2) ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾಳೆ. </p><p>‘ಮಹಾನಗರ ಪಾಲಿಕೆ ಮತ್ತು ಸದಸ್ಯ ಅಜೀಮ್ ಪಟವೇಗಾರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ. ಆರಾಧ್ಯಳ ಹೆತ್ತವರು ಅಂಗವಿಕಲರಿದ್ದು, ಬಡ ಕುಟುಂಬವಿದೆ. ಚಿಕಿತ್ಸೆಗೆ ತಗುಲುವ ವೆಚ್ಚವನ್ನೆಲ್ಲ ಪಾಲಿಕೆ ವತಿಯಿಂದಲೇ ಭರಿಸಬೇಕು’ ಎಂದು ಆರಾಧ್ಯಾಳ ಸಂಬಂಧಿ ಸತೀಶ ತರಗಾರ ಒತ್ತಾಯಿಸಿದ್ದಾರೆ.</p><p>‘ಮಾರುತಿ ನಗರದಲ್ಲಿ ನಮ್ಮ ಕುಟುಂಬದ ಎರಡು ಮನೆಗಳಿವೆ. ಒಂದು ಮನೆಯಿಂದ ಮತ್ತೊಂದು ಮನೆಗೆ ಬಾಲಕಿ ಬರುವಾಗ ಬೀದಿನಾಯಿ ಕಚ್ಚಿ ಗಾಯಗೊಳಿಸಿದೆ’ ಎಂದು ಹೇಳಿದ್ದಾರೆ.</p><p>ಪ್ರತಿಕ್ರಿಯೆಗಾಗಿ ಮಹಾನಗರ ಪಾಲಿಕೆ ಆಯುಕ್ತೆ ಬಿ.ಶುಭ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದರೂ ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>