<p><strong>ಬೆಳಗಾವಿ</strong>: ‘ಪೊಲೀಸ್ ಮತ್ತು ರಕ್ಷಣಾ ಪಡೆಗಳಲ್ಲಿ ಶ್ವಾನದಳ, ವಿಧ್ವಂಸಕ ಕೃತ್ಯ ತಪಾಸಣೆ ತಂಡ, ವಿಲೇವಾರಿ ದಳ ಪ್ರಮುಖ ಘಟಕಗಳಾಗಿವೆ. ಇವುಗಳಿಂದ ಅದೆಷ್ಟೋ ಆಪತ್ತು ದೂರವಾಗಿವೆ’ ಎಂದು ನಗರ ಪೊಲೀಸ್ ಆಯುಕ್ತಾಲಯದ ಉಪ ಮೀಸಲು ಪೊಲೀಸ್ ನಿರೀಕ್ಷಕ ವಿಠ್ಠಲ ಗೊರಬಾಲ ಹೇಳಿದರು.</p>.<p>ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಅಪರಾಧ ಶಾಸ್ತ್ರ ಮತ್ತು ವಿಧಿ ವಿಜ್ಞಾನ ವಿಭಾಗದ ವತಿಯಿಂದ ‘ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ಸ್ಕ್ವಾಡ್ ಕಾರ್ಯವಿಧಾನ’ ಕುರಿತು ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಡಾಗ್ ಸ್ಕ್ವಾಡ್ ಮೂಲಕ ಅಪರಾಧಿಗಳು ಮತ್ತು ನಿಷೇಧಿತ ವಸ್ತು ಪತ್ತೆ ಹಚ್ಚುವುದು, ಸ್ಫೋಟಕ ವಸ್ತು ಗುರುತಿಸುವುದು, ಅಪರಾಧ ಸ್ಥಳದಲ್ಲಿ ಸಾಕ್ಷ್ಯಗಳನ್ನು ಪತ್ತೆ ಮಾಡುವುದನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಲಾಯಿತು.</p>.<p>ಉಪ ಪ್ರಾಚಾರ್ಯ ಪ್ರೊ.ಅರ್ಜುನ ಜಂಬಗಿ ಅಧ್ಯಕ್ಷತೆ ವಹಿಸಿದ್ದರು. ಅಪರಾಧ ಶಾಸ್ತ್ರ ಮತ್ತು ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಚಿದಾನಂದ ಹಾರೂಗೇರಿ, ಮುಕುಂದ ಮುಂಡರಗಿ ಇದ್ದರು. ಯೋಗೇಶ ಕಾಂಬಳೆ ವಂದಿಸಿದರು. ಸಹಾನಾ ನರಗುಂದ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಪೊಲೀಸ್ ಮತ್ತು ರಕ್ಷಣಾ ಪಡೆಗಳಲ್ಲಿ ಶ್ವಾನದಳ, ವಿಧ್ವಂಸಕ ಕೃತ್ಯ ತಪಾಸಣೆ ತಂಡ, ವಿಲೇವಾರಿ ದಳ ಪ್ರಮುಖ ಘಟಕಗಳಾಗಿವೆ. ಇವುಗಳಿಂದ ಅದೆಷ್ಟೋ ಆಪತ್ತು ದೂರವಾಗಿವೆ’ ಎಂದು ನಗರ ಪೊಲೀಸ್ ಆಯುಕ್ತಾಲಯದ ಉಪ ಮೀಸಲು ಪೊಲೀಸ್ ನಿರೀಕ್ಷಕ ವಿಠ್ಠಲ ಗೊರಬಾಲ ಹೇಳಿದರು.</p>.<p>ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಅಪರಾಧ ಶಾಸ್ತ್ರ ಮತ್ತು ವಿಧಿ ವಿಜ್ಞಾನ ವಿಭಾಗದ ವತಿಯಿಂದ ‘ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ಸ್ಕ್ವಾಡ್ ಕಾರ್ಯವಿಧಾನ’ ಕುರಿತು ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಡಾಗ್ ಸ್ಕ್ವಾಡ್ ಮೂಲಕ ಅಪರಾಧಿಗಳು ಮತ್ತು ನಿಷೇಧಿತ ವಸ್ತು ಪತ್ತೆ ಹಚ್ಚುವುದು, ಸ್ಫೋಟಕ ವಸ್ತು ಗುರುತಿಸುವುದು, ಅಪರಾಧ ಸ್ಥಳದಲ್ಲಿ ಸಾಕ್ಷ್ಯಗಳನ್ನು ಪತ್ತೆ ಮಾಡುವುದನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಲಾಯಿತು.</p>.<p>ಉಪ ಪ್ರಾಚಾರ್ಯ ಪ್ರೊ.ಅರ್ಜುನ ಜಂಬಗಿ ಅಧ್ಯಕ್ಷತೆ ವಹಿಸಿದ್ದರು. ಅಪರಾಧ ಶಾಸ್ತ್ರ ಮತ್ತು ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಚಿದಾನಂದ ಹಾರೂಗೇರಿ, ಮುಕುಂದ ಮುಂಡರಗಿ ಇದ್ದರು. ಯೋಗೇಶ ಕಾಂಬಳೆ ವಂದಿಸಿದರು. ಸಹಾನಾ ನರಗುಂದ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>