<p><strong>ಬೆಳಗಾವಿ: </strong>‘ಕಳೆದ ಸಾಲಿನಂತೆ ಈ ಬಾರಿಯೂ ಕೊರೊನಾ ಬಂದೆರಗಿದೆ. ಇದರಿಂದ ದೇಶದೆಲ್ಲೆಡೆ ರಕ್ತದ ಕೊರತೆ ಕಾಡುತ್ತಿದೆ. ಅತ್ಯಂತ ಕಠಿಣ ಮತ್ತು ತುರ್ತು ಸಂದರ್ಭದಲ್ಲಿ ಅವಶ್ಯವಿರುವುದರಿಂದ, ದಾನಿಗಳು ರಕ್ತ ನೀಡಲು ಮುಂದೆ ಬರಬೇಕು’ ಎಂದು ಜೆಎನ್ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ.ನಿರಂಜನಾ ಎಸ್. ಮಹಾಂತಶೆಟ್ಟಿ ಹೇಳಿದರು.</p>.<p>ಇಲ್ಲಿನ ಕೆಎಲ್ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ, ರೆಡ್ ಕ್ರಾಸ್ ಸಂಸ್ಥೆ ಹಾಗೂ ಜೆಎನ್ ವೈದ್ಯಕೀಯ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯಾವುದೇ ಶಸ್ತ್ರಚಿಕಿತ್ಸೆ ನೆರವೇರಬೇಕಾದರೆ ರಕ್ತವು ಅತ್ಯವಶ್ಯವಾಗಿರುತ್ತದೆ. ಅದರಲ್ಲೂ ಹೆರಿಗೆ ಸಂದರ್ಭದಲ್ಲಿ ಹೆಚ್ಚು ಅಗತ್ಯವಿರುತ್ತದೆ. ಕೊರತೆ ನೀಗಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ’ ಎಂದರು.</p>.<p>ಕೆಎಲ್ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಸಚಿವ ಡಾ.ವಿ.ಎ. ಕೋಠಿವಾಲೆ, ರಕ್ತ ಭಂಡಾರದ ಮುಖ್ಯಸ್ಥ ಡಾ.ಎಸ್.ವಿ. ವಿರಗಿ, ಡಾ.ಮಹಾಂತೇಶ ರಾಮಣ್ಣವರ, ಡಾ.ಅಶ್ವಿನಿ ನರಸಣ್ಣವರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕಳೆದ ಸಾಲಿನಂತೆ ಈ ಬಾರಿಯೂ ಕೊರೊನಾ ಬಂದೆರಗಿದೆ. ಇದರಿಂದ ದೇಶದೆಲ್ಲೆಡೆ ರಕ್ತದ ಕೊರತೆ ಕಾಡುತ್ತಿದೆ. ಅತ್ಯಂತ ಕಠಿಣ ಮತ್ತು ತುರ್ತು ಸಂದರ್ಭದಲ್ಲಿ ಅವಶ್ಯವಿರುವುದರಿಂದ, ದಾನಿಗಳು ರಕ್ತ ನೀಡಲು ಮುಂದೆ ಬರಬೇಕು’ ಎಂದು ಜೆಎನ್ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯೆ ಡಾ.ನಿರಂಜನಾ ಎಸ್. ಮಹಾಂತಶೆಟ್ಟಿ ಹೇಳಿದರು.</p>.<p>ಇಲ್ಲಿನ ಕೆಎಲ್ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ, ರೆಡ್ ಕ್ರಾಸ್ ಸಂಸ್ಥೆ ಹಾಗೂ ಜೆಎನ್ ವೈದ್ಯಕೀಯ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯಾವುದೇ ಶಸ್ತ್ರಚಿಕಿತ್ಸೆ ನೆರವೇರಬೇಕಾದರೆ ರಕ್ತವು ಅತ್ಯವಶ್ಯವಾಗಿರುತ್ತದೆ. ಅದರಲ್ಲೂ ಹೆರಿಗೆ ಸಂದರ್ಭದಲ್ಲಿ ಹೆಚ್ಚು ಅಗತ್ಯವಿರುತ್ತದೆ. ಕೊರತೆ ನೀಗಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ’ ಎಂದರು.</p>.<p>ಕೆಎಲ್ಇ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಕುಲಸಚಿವ ಡಾ.ವಿ.ಎ. ಕೋಠಿವಾಲೆ, ರಕ್ತ ಭಂಡಾರದ ಮುಖ್ಯಸ್ಥ ಡಾ.ಎಸ್.ವಿ. ವಿರಗಿ, ಡಾ.ಮಹಾಂತೇಶ ರಾಮಣ್ಣವರ, ಡಾ.ಅಶ್ವಿನಿ ನರಸಣ್ಣವರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>