<p><strong>ಬೆಳಗಾವಿ: </strong>‘ಕೋವಿಡ್-19 ಸಂಕಷ್ಟದ ಸಮಯದಲ್ಲಿ ಮೈಕ್ರೋಫೈನಾನ್ಸ್ ಹಾಗೂ ಇತರ ಹಣಕಾಸು ಸಂಸ್ಥೆಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡುವಂತಿಲ್ಲ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.</p>.<p>ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಸಮೀಕ್ಷಾ ಸಮಿತಿಯಿಂದ ಇಲ್ಲಿ ಮಂಗಳವಾರ ನಡೆದ ಮೈಕ್ರೋಫೈನಾನ್ಸ್ ಹಾಗೂ ಹಣಕಾಸು ಸಂಸ್ಥೆಗಳ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೊರೊನಾದಿಂದಾಗಿ ಜನರು ಆರ್ಥಿಕ ಸಂಕಷ್ಟದಲ್ಲಿದ್ದು, ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬಾರದು. ಒಂದು ವೇಳೆ ಅಂತಹ ಪ್ರಕರಣಗಳು ಕಂಡುಬಂದಲ್ಲಿ ಸಮಿತಿ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಬ್ಯಾಂಕ್ಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ‘ಸದ್ಯದ ಕಠಿಣ ಪರಿಸ್ಥಿತಿಗಳಿಂದಾಗಿ ಎಂಎಫ್ಐ ಮತ್ತು ಎನ್ಬಿಎಫ್ಸಿಗಳು ಕಠಿಣ ಚೇತರಿಕೆ ಕ್ರಮಗಳಿಗೆ ಹೋಗಬಾರದು’ ಎಂದು ಸಲಹೆ ನೀಡಿದರು.</p>.<p>‘ಕೈಗೆಟುಕುವ ವಸತಿ ಯೋಜನೆಗಳು ಬೆಳಗಾವಿ ಮತ್ತು ನಿಪ್ಪಾಣಿಯಲ್ಲಿ ಪ್ರಾರಂಭವಾಗಿವೆ. ಸಾಲವನ್ನು ಶೀಘ್ರವಾಗಿ ಮಂಜೂರು ಮಾಡಬೇಕು. ಆತ್ಮನಿರ್ಭರ್ ನಿಧಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಆದ್ಯತೆ ನೀಡಬೇಕು. ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡಬೇಕು’ ಎಂದು ತಿಳಿಸಿದರು.</p>.<p>ಇದೇ ವೇಳೆ, 2020-21ನೇ ವಾರ್ಷಿಕ ಜಮಾ ಯೋಜನೆ ಮಂಡಿಸಲಾಯಿತು. ಆ ಪ್ರಕಾರ ₹ 17,052 ಕೋಟಿ ಗುರಿ ಹೊಂದಲಾಗಿತ್ತು. ಜಿಲ್ಲೆಯು ₹21,232 ಕೋಟಿ ಗುರಿ ತಲುಪಲಾಗಿದೆ. ಎಲ್ಲ ಬ್ಯಾಂಕುಗಳು ವಲಯವಾರು ಸಾಧನೆ ಮಾಡಿವೆ. ಕೃಷಿ ಕ್ಷೇತ್ರದಿಂದ ₹ 9,566 ಕೋಟಿ ಗುರಿ ಹೊಂದಿದ್ದು, ₹9,727 ಕೋಟಿ ಜಮೆ ಆಗಿದೆ. ಶೇ 102ರಷ್ಟು ಜಮೆಯಾಗಿದೆ. ಅಂತೆಯೇ, ಎಂಎಸ್ಎಂಇ ಕ್ಷೇತ್ರದಿಂದ ₹ 3,225 ಕೋಟಿ ಗುರಿಯಲ್ಲಿ ₹ 4,233 ಕೋಟಿ ಜಮೆ ಆಗಿದೆ. ಶೇ 131ರಷ್ಟು ಸಾಧನೆಯಾಗಿದೆ. ಆದ್ಯತೆ ಹಾಗೂ ಆದ್ಯತೇತರ ಕ್ಷೇತ್ರಗಳಲ್ಲಿಯೂ ಉತ್ತಮ ಸಾಧನೆ ಮಾಡಲಾಗಿದೆ. 2012-22ನೇ ಸಾಲಿಗೆ ಆದ್ಯತೆ ಹಾಗೂ ಆದ್ಯತೇತರ ಕ್ಷೇತ್ರಗಳಿಗೆ ₹ 19,674 ಕೋಟಿ ಗುರಿ ನೀಡಲಾಗಿದೆ ಎಂದು ಮಾಹಿತಿ ನೀಡಲಾಯಿತು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ರಾಹುಲ್ ವಿಂಜಮುರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕೋವಿಡ್-19 ಸಂಕಷ್ಟದ ಸಮಯದಲ್ಲಿ ಮೈಕ್ರೋಫೈನಾನ್ಸ್ ಹಾಗೂ ಇತರ ಹಣಕಾಸು ಸಂಸ್ಥೆಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡುವಂತಿಲ್ಲ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.</p>.<p>ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಸಮೀಕ್ಷಾ ಸಮಿತಿಯಿಂದ ಇಲ್ಲಿ ಮಂಗಳವಾರ ನಡೆದ ಮೈಕ್ರೋಫೈನಾನ್ಸ್ ಹಾಗೂ ಹಣಕಾಸು ಸಂಸ್ಥೆಗಳ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೊರೊನಾದಿಂದಾಗಿ ಜನರು ಆರ್ಥಿಕ ಸಂಕಷ್ಟದಲ್ಲಿದ್ದು, ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬಾರದು. ಒಂದು ವೇಳೆ ಅಂತಹ ಪ್ರಕರಣಗಳು ಕಂಡುಬಂದಲ್ಲಿ ಸಮಿತಿ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಬ್ಯಾಂಕ್ಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ‘ಸದ್ಯದ ಕಠಿಣ ಪರಿಸ್ಥಿತಿಗಳಿಂದಾಗಿ ಎಂಎಫ್ಐ ಮತ್ತು ಎನ್ಬಿಎಫ್ಸಿಗಳು ಕಠಿಣ ಚೇತರಿಕೆ ಕ್ರಮಗಳಿಗೆ ಹೋಗಬಾರದು’ ಎಂದು ಸಲಹೆ ನೀಡಿದರು.</p>.<p>‘ಕೈಗೆಟುಕುವ ವಸತಿ ಯೋಜನೆಗಳು ಬೆಳಗಾವಿ ಮತ್ತು ನಿಪ್ಪಾಣಿಯಲ್ಲಿ ಪ್ರಾರಂಭವಾಗಿವೆ. ಸಾಲವನ್ನು ಶೀಘ್ರವಾಗಿ ಮಂಜೂರು ಮಾಡಬೇಕು. ಆತ್ಮನಿರ್ಭರ್ ನಿಧಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಆದ್ಯತೆ ನೀಡಬೇಕು. ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡಬೇಕು’ ಎಂದು ತಿಳಿಸಿದರು.</p>.<p>ಇದೇ ವೇಳೆ, 2020-21ನೇ ವಾರ್ಷಿಕ ಜಮಾ ಯೋಜನೆ ಮಂಡಿಸಲಾಯಿತು. ಆ ಪ್ರಕಾರ ₹ 17,052 ಕೋಟಿ ಗುರಿ ಹೊಂದಲಾಗಿತ್ತು. ಜಿಲ್ಲೆಯು ₹21,232 ಕೋಟಿ ಗುರಿ ತಲುಪಲಾಗಿದೆ. ಎಲ್ಲ ಬ್ಯಾಂಕುಗಳು ವಲಯವಾರು ಸಾಧನೆ ಮಾಡಿವೆ. ಕೃಷಿ ಕ್ಷೇತ್ರದಿಂದ ₹ 9,566 ಕೋಟಿ ಗುರಿ ಹೊಂದಿದ್ದು, ₹9,727 ಕೋಟಿ ಜಮೆ ಆಗಿದೆ. ಶೇ 102ರಷ್ಟು ಜಮೆಯಾಗಿದೆ. ಅಂತೆಯೇ, ಎಂಎಸ್ಎಂಇ ಕ್ಷೇತ್ರದಿಂದ ₹ 3,225 ಕೋಟಿ ಗುರಿಯಲ್ಲಿ ₹ 4,233 ಕೋಟಿ ಜಮೆ ಆಗಿದೆ. ಶೇ 131ರಷ್ಟು ಸಾಧನೆಯಾಗಿದೆ. ಆದ್ಯತೆ ಹಾಗೂ ಆದ್ಯತೇತರ ಕ್ಷೇತ್ರಗಳಲ್ಲಿಯೂ ಉತ್ತಮ ಸಾಧನೆ ಮಾಡಲಾಗಿದೆ. 2012-22ನೇ ಸಾಲಿಗೆ ಆದ್ಯತೆ ಹಾಗೂ ಆದ್ಯತೇತರ ಕ್ಷೇತ್ರಗಳಿಗೆ ₹ 19,674 ಕೋಟಿ ಗುರಿ ನೀಡಲಾಗಿದೆ ಎಂದು ಮಾಹಿತಿ ನೀಡಲಾಯಿತು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ರಾಹುಲ್ ವಿಂಜಮುರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>