ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊರೊನಾ ವೈರಸ್‌ಗೆ ಅಂಜಬೇಕಿಲ್ಲ’

Last Updated 9 ಸೆಪ್ಟೆಂಬರ್ 2020, 14:52 IST
ಅಕ್ಷರ ಗಾತ್ರ

ಗೋಕಾಕ: ‘ಕೋವಿಡ್-19 ಬಗ್ಗೆ ಅಂಜಬೇಕಿಲ್ಲ. ಧೈರ್ಯದಿಂದ ಮುಂಜಾಗ್ರತೆ ವಹಿಸಿದರೆ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಬುಧವಾರ ಪಕ್ಷದ ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಕಾಂಗ್ರೆಸ್ ಕಾರ್ಯಕರ್ತರಿಗೆ ಬುಧವಾರ ಕೊರೊನಾ ಸೋಂಕು ತಪಾಸಣಾ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

‘ಕಡಿಮೆ ವೆಚ್ಚದಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಜನರು ಉಹಾಪೋಹಗಳಿಗೆ ಕಿವಿ ಕೊಡಬಾರದು’ ಎಂದು ಸಲಹೆ ನೀಡಿದರು.

ನಗರ ಹಾಗೂ ಗ್ರಾಮೀಣ ಘಟಕದ ಅಧ್ಯಕ್ಷ ಝಾಕೀರ ನದಾಫ, ಪ್ರಕಾಶ ಡಾಂಗೆ, ರಿಯಾಜ ಚೌಗಲಾ, ವಿವೇಕ ಜತ್ತಿ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ರಾಮಗಾನಟ್ಟಿ, ಮುನ್ನಾ ಖತೀಬ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT