ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತ ಸಮಾಜವನ್ನು ರಾಜಕೀಯ ದಾಳ ಮಾಡಬೇಡಿ: ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ

Published 24 ಏಪ್ರಿಲ್ 2023, 12:46 IST
Last Updated 24 ಏಪ್ರಿಲ್ 2023, 12:46 IST
ಅಕ್ಷರ ಗಾತ್ರ

ಮೂಡಲಗಿ: ‘ರಾಜಕಾರಣಿಗಳು ಲಿಂಗಾಯತ ಸಮಾಜವನ್ನು ರಾಜಕೀಯ ದಾಳವನ್ನಾಗಿ ಮಾಡಿಕೊಂಡು ಟೀಕೆ, ಟಿಪ್ಪಣೆ ಮಾಡುವುದನ್ನು ಬಿಡಬೇಕು. ಎಲ್ಲ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆಯನ್ನು ಪ್ರಕಟಿಸು ಮೂಲಕ ಸ್ಪಷ್ಟ ನಿಲುವು ತಿಳಿಸಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಸಮಾಜ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಇಲ್ಲಿಯ ಬಸವ ಸೇವಾ ಯುವಕ ಸಂಘದವರು ಸೋಮವಾರ ಏರ್ಪಡಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ಬಸವ ಉತ್ಸವದ ಬೃಹತ್ ಮೆರವಣಿಗೆಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳ ಟೀಕೆಗಳು ವೈಯಕ್ತಿಕವಾಗಿ ಮಾಡಿರುವ ತಪ್ಪುಗಳು ವ್ಯಕ್ತಿಗತವಾಗಿಲಿ. ಅದು ಬಿಟ್ಟು ಒಂದು ಸಮಾಜ, ಜನಾಂಗ, ಧರ್ಮವನ್ನು ಬಳಸಿ ಟೀಕೆ ಮಾಡುವುದು ಯಾವ ರಾಜಕಾರಣಿಗೂ ಶೋಭೆ ತರುವಂತದಲ್ಲ. ಸಿದ್ದರಾಮಯ್ಯನವರು ಈಗಾಗಲೇ ಸ್ಪಷ್ಟೀಕರಣ ನೀಡಿದ್ದರಿಂದ ಅವರ ಹೇಳಿಕೆಯನ್ನು ಮತ್ತೆ ಮುಂದುವರಿಸುವುದು ಬೇಡ ಎಂದರು.

ಮೂಡಲಗಿಯಲ್ಲಿ ಬಸವ ಯುವಕ ಸಂಘದವರು ಬಸವ ಜಯಂತಿ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಬೃಹತ್‌ ಮೆರವಣಿಗೆಯಲ್ಲಿ ಕುಂಭ ಹೊತ್ತ ಮಹಿಳೆಯರ ಸಾಲು
ಮೂಡಲಗಿಯಲ್ಲಿ ಬಸವ ಯುವಕ ಸಂಘದವರು ಬಸವ ಜಯಂತಿ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಬೃಹತ್‌ ಮೆರವಣಿಗೆಯಲ್ಲಿ ಕುಂಭ ಹೊತ್ತ ಮಹಿಳೆಯರ ಸಾಲು

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ್ದ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಮೂಲ ಅಂಶವನ್ನು ಪ್ರತಿಪಾದಿಸಿದ್ದರು. ಕೇಂದ್ರ ಸರ್ಕಾರವು ಹೊಸ ಪಾರ್ಲಿಮೆಂಟ್ ಕಟ್ಟಡವನ್ನು ಅನುಭವ ಮಂಟಪದ ಮಾದರಿಯಲ್ಲಿ ನಿರ್ಮಿಸುತ್ತಿರುವುದು ಸ್ತುತ್ಯಾರ್ಹ. ಹೊಸ ಕಟ್ಟಡದ ಒಂದು ಭಾಗಕ್ಕೆ ಅನುಭವ ಮಂಟಪ ಎಂದು ಸರ್ಕಾರವು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಮೂಡಲಗಿಯ ಬಸವ ಯುವಕ ಸಂಘದವರು ಬಸವ ಜಯಂತಿ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಮೆರವಣಿಗೆಗೆ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಿದರು.   
ಮೂಡಲಗಿಯ ಬಸವ ಯುವಕ ಸಂಘದವರು ಬಸವ ಜಯಂತಿ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಮೆರವಣಿಗೆಗೆ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಿದರು.   

ಪಂಚಮಸಾಲಿ ಸಮಾಜಕ್ಕೆ ಸರ್ಕಾರವು 2ಡಿ ಮೀಸಲಾತಿ ನೀಡಿದ್ದು, ಇದು ಮೊದಲ ಹಂತದ ಸಮಾಜಕ್ಕೆ ಗೆಲವು ಆಗಿದೆ. ಇತರೆ ಸಮಾಜಗಳಿಗೂ ಅನುಕೂಲವಾಗಿರುವ ತೃಪ್ತಿ ಇದೆ. ಚುನಾವಣೆ ನಂತರ ಪಂಚಮಸಾಲಿ ಸಮಾಜಕ್ಕೆ ನ್ಯಾಯಬದ್ಧವಾಗಿ ದೊರೆಯಬೇಕಾದ ಮೀಸಲಾತಿಗಾಗಿ ಹೋರಾಟ ಮುಂದುವರೆಯುತ್ತದೆ ಎಂದರು.

ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಿತು. ಆರತಿ, ಕುಂಭ ಹೊತ್ತ ನೂರಾರು ಮಹಿಳೆಯರು, ಅಲಂಕೃತ ಜೋಡೆತ್ತುಗಳು, ಅಲಂಕೃತ ಟ್ರ್ಯಾಕ್ಟರ್‌ಗಳು, ಹಾರಾಡುವ ಕೇಸರಿ ಧ್ವಜಗಳು ಗಮನಸೆಳೆದವು.

ಬಸವ ಸಮಿತಿ ಅಧ್ಯಕ್ಷ ಕಲ್ಮೇಶ ಗೋಕಾಕ, ಉಪಾಧ್ಯಕ್ಷ ಪ್ರವೀಣ ಕುರಬಗಟ್ಟಿ, ಕಾರ್ಯದರ್ಶಿ ಉಮೇಶ ಶೆಕ್ಕಿ ಹಾಗೂ ಪಂಚಮಸಾಲಿ ಸಮಾಜ ಸಂಘದ ಪದಾಧಿಕಾರಿಗಳು, ವಿವಿಧ ಸಮಾಜದ ಜನರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT