<p><strong>ಐಗಳಿ (ಬೆಳಗಾವಿ ಜಿಲ್ಲೆ): </strong>‘ಗ್ರಾಮದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ಗ್ರಾಮ ಪಂಚಾಯ್ತಿ ಸದಸ್ಯರು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡಿ, ಮತ್ತೊಮ್ಮೆ ಆಯ್ಕೆಯಾಗುವಂತೆ ನಡೆದುಕೊಳ್ಳಬೇಕು’ ಎಂದು ನೆಲೋಗಿಯ ಸಿದ್ದಲಿಂಗ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಸಿಂಧೂರ ವಸತಿಯ ಅಪ್ಪಯ್ಯ ಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜನಪ್ರತಿನಿಧಿಗಳು ಮೂಲ ಸೌಲಭ್ಯ, ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯ ಕಲ್ಪಿಸಲು ಆದ್ಯತೆ ಕೊಡಬೇಕು’ ಎಂದರು.</p>.<p>ಗ್ರಾ.ಪಂ. ಅಧ್ಯಕ್ಷೆ ರಾಜಶ್ರೀ ಶಂ.ಪಾಟೀಲ ಮಾತನಾಡಿ, ‘ಎಲ್ಲರ ಸಹಕಾರದೊಂದಿಗೆ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಕಕಮರಿ ಮಠದ ಅಭಿನವ ಗುರುಲಿಂಗ ಜಂಗಮ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ನಿಂಗನಗೌಡ ಪಾಟೀಲ, ಗಿರೀಶ ಬಸರಗಿ, ಶಿದರಾಯ ಬಿರಾದಾರ, ಟ್ರಸ್ಟ್ ಸಮಿತಿ ಅಧ್ಯಕ್ಷ ನರಸಪ್ಪ ಸಿಂಧೂರ, ರಮೇಶಗೌಡ ಪಾಟೀಲ, ಚಂದ್ರಕ್ಕ ಹಾಲಳ್ಳಿ, ಶಕುಂತಲಾ ಬಿರಾದಾರ, ಅನುಸೂಯಾ ಪಾಟೀಲ ಇದ್ದರು.</p>.<p>ಕೆ.ಎಸ್. ಬಿರಾದಾರ ಸ್ವಾಗತಿಸಿದರು. ಮಹಾದೇವ ಹಾಲಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಗಳಿ (ಬೆಳಗಾವಿ ಜಿಲ್ಲೆ): </strong>‘ಗ್ರಾಮದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ಗ್ರಾಮ ಪಂಚಾಯ್ತಿ ಸದಸ್ಯರು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡಿ, ಮತ್ತೊಮ್ಮೆ ಆಯ್ಕೆಯಾಗುವಂತೆ ನಡೆದುಕೊಳ್ಳಬೇಕು’ ಎಂದು ನೆಲೋಗಿಯ ಸಿದ್ದಲಿಂಗ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಸಿಂಧೂರ ವಸತಿಯ ಅಪ್ಪಯ್ಯ ಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜನಪ್ರತಿನಿಧಿಗಳು ಮೂಲ ಸೌಲಭ್ಯ, ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯ ಕಲ್ಪಿಸಲು ಆದ್ಯತೆ ಕೊಡಬೇಕು’ ಎಂದರು.</p>.<p>ಗ್ರಾ.ಪಂ. ಅಧ್ಯಕ್ಷೆ ರಾಜಶ್ರೀ ಶಂ.ಪಾಟೀಲ ಮಾತನಾಡಿ, ‘ಎಲ್ಲರ ಸಹಕಾರದೊಂದಿಗೆ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಕಕಮರಿ ಮಠದ ಅಭಿನವ ಗುರುಲಿಂಗ ಜಂಗಮ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ನಿಂಗನಗೌಡ ಪಾಟೀಲ, ಗಿರೀಶ ಬಸರಗಿ, ಶಿದರಾಯ ಬಿರಾದಾರ, ಟ್ರಸ್ಟ್ ಸಮಿತಿ ಅಧ್ಯಕ್ಷ ನರಸಪ್ಪ ಸಿಂಧೂರ, ರಮೇಶಗೌಡ ಪಾಟೀಲ, ಚಂದ್ರಕ್ಕ ಹಾಲಳ್ಳಿ, ಶಕುಂತಲಾ ಬಿರಾದಾರ, ಅನುಸೂಯಾ ಪಾಟೀಲ ಇದ್ದರು.</p>.<p>ಕೆ.ಎಸ್. ಬಿರಾದಾರ ಸ್ವಾಗತಿಸಿದರು. ಮಹಾದೇವ ಹಾಲಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>