ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿರುವ ಮರಾಠಾ ಸಮಾಜದವರು ಕನ್ನಡಿಗರೇ ಆಗಿದ್ದಾರೆ. ಹಿಂದುಳಿದ ಹಾಗೂ ಬಡತನದಲ್ಲಿರುವ ಅವರ ಅಭಿವೃದ್ಧಿಗಾಗಿ ಕರ್ನಾಟಕದಲ್ಲಿ ಪ್ರಾಧಿಕಾರ ರಚಿಸುವುದು ಯೋಗ್ಯವಾಗಿದೆ. ಈ ನಿಟ್ಟಿನಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹವಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ’ ಎಂದು ತಿಳಿಸಿದರು.