ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ‘ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನುದಾನ ಕೊಡುತ್ತಿಲ್ಲ ಎಂದು ಕಾಂಗ್ರೆಸ್ನವರು ಸುಳ್ಳು ಆಪಾದನೆ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನಿಯಮಾನುಸಾರ ಅನುದಾನ ಕೊಡುತ್ತಿದೆ. ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಮನಮೋಹನ್ಸಿಂಗ್ ನೇತೃತ್ವದ ಸರ್ಕಾರ 2004ರಿಂದ 2014ರ ಅವಧಿಯಲ್ಲಿ ರಾಜ್ಯಕ್ಕೆ ₹81 ಸಾವಿರ ಕೋಟಿ ಅನುದಾನ ಕೊಟ್ಟಿತ್ತು. ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಿಂದ ಈವರೆಗೆ ₹2.85 ಲಕ್ಷ ಕೋಟಿ ಕೊಟ್ಟಿದೆ. ಯುಪಿಎ ಸರ್ಕಾರಕ್ಕಿಂತ ದುಪ್ಪಟ್ಟು ಹಣ ಈಗ ಕೊಡಲಾಗಿದೆ. ಆದರೆ, ಕಾಂಗ್ರೆಸ್ನವರು ನಿರಾಧಾರವಾಗಿ ಆರೋಪಿಸುತ್ತಿದ್ದಾರೆ’ ಎಂದರು.