ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಕೊಲೆ

Last Updated 6 ಅಕ್ಟೋಬರ್ 2022, 17:04 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ.

ಸುಳೇಭಾವಿ ಗ್ರಾಮದ ಮಹೇಶ ಮುರಾರಿ (26) ಹಾಗೂ ಪ್ರಕಾಶ ಹುಂಕ್ರಿಪಾಟೀಲ (24) ಹತ್ಯೆಯಾದವರು. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಘಟನೆಯಿಂದಾಗಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಇಬ್ಬರೂ ಯುವಕರು ಗುರುವಾರ ರಾತ್ರಿ ಸುಳೇಭಾವಿ ಗ್ರಾಮದ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ನಿಂತಿದ್ದರು. ಅಲ್ಲಿಗೆ ಬಂದ ದುಷ್ಕರ್ಮಿಗಳ ಗುಂಪು ಏಕಾಏಕಿ ಮಾರಕಾಸ್ತ್ರಗಳಿಂದ ಇಬ್ಬರನ್ನೂ ಕೊಚ್ಚಲು ಶುರು ಮಾಡಿತು. ದಾಳಿಯಿಂದ ತಪ್ಪಿಸಿಕೊಳ್ಳಲು ಇಬ್ಬರೂ ಓಡಿದರು. ಬೆನ್ನಟ್ಟಿದ ಗುಂಪು ಪದೇಪದೇ ಕೊಚ್ಚಿಹಾಕಿತು. ಅವರು ಸತ್ತಿದ್ದನ್ನು ಖಚಿತ ಮಾಡಿಕೊಂಡು ಪರಾರಿಯಾಯಿತು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ನಗರ ಪೊಲೀಸ್ ಆಯುಕ್ತ ‌ಡಾ.ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾಡಿ ಹಾಗೂ ಮಾರಿಹಾಳ‌ ಠಾಣೆ ಸಿಬ್ಬಂದಿ ಸೇರಿ ನೂರಕ್ಕೂ ಹೆಚ್ಚು ಪೊಲೀಸರು ಗ್ರಾಮಕ್ಕೆ ದೌಡಾಯಿಸಿದರು. ಎಲ್ಲೆಡೆ ಬಂದೋಬಸ್ತ್‌ ಮಾಡಿ, ರಾತ್ರಿ ಜನ ಹೊರಬರದಂತೆ ಎಚ್ಚರಿಕೆ ನೀಡಿದರು. ಘಟನೆಯಿಂದಾಗಿ ಗ್ರಾಮದ ಜನ ಬೆಚ್ಚಿಬಿದ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT