<p><strong>ಖಾನಾಪುರ:</strong> ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಡಿ ಖಾನಾಪುರ ವಿಧಾನಸಭಾ ಕ್ಷೇತ್ರಕ್ಕೆ ₹500 ಕೋಟಿಯಷ್ಟು ಅನುದಾನ ಹರಿದು ಬಂದಿದೆ ಎಂದು ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳಕರ ಹೇಳಿದರು.</p>.<p>ಇದರ ಪ್ರಯೋಜನ ಪಡೆದಿರುವ ತಾಲ್ಲೂಕಿನ ಸಾವಿರಾರು ಕುಟುಂಬಗಳು ಈಗ ನೆಮ್ಮದಿಯ ಜೀವನ ನಡೆಸುತ್ತಿವೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಸರ್ಕಾರ ಕಳೆದ 1000 ದಿನಗಳಲ್ಲಿ ಈ ಯೋಜನೆಗಳಿಗಾಗಿ ₹1.16 ಲಕ್ಷ ಕೋಟಿ ವ್ಯಯಿಸಿದ್ದು, ರಾಜ್ಯದ 1.37 ಕೋಟಿ ಕುಟುಂಬಗಳಿಗೆ ಇದರಿಂದ ಪ್ರಯೋಜನ ಸಿಕ್ಕಿದೆ. ನಮ್ಮ ತಾಲ್ಲೂಕಿಗೆ ಈ ಯೋಜನೆಗಳಡಿ ವಿತರಣೆಗೆ ಪ್ರತಿ ತಿಂಗಳು ₹20 ಕೋಟಿ ಅನುದಾನ ಲಭ್ಯವಾಗುತ್ತಿದ್ದು, ಗ್ಯಾರಂಟಿ ಯೋಜನೆಗಳು ಪ್ರಾರಂಭವಾಗಿ 27 ತಿಂಗಳಲ್ಲಿ ₹500 ಕೋಟಿಗೂ ಹೆಚ್ಚು ಹಣ ಲಭ್ಯವಾಗಿದೆ. ಈ ಮೂಲಕ ಬಡವರು, ಸಾಮಾನ್ಯರು, ಶ್ರಮಜೀವಿಗಳು, ಕಾರ್ಮಿಕರು, ರೈತರು ಮತ್ತು ಮಹಿಳೆಯರ ಸಬಲೀಕರಣಕ್ಕೆ ಪಕ್ಷ ಹೆಚ್ಚು ಒತ್ತು ನೀಡಿದೆ’ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ:</strong> ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಡಿ ಖಾನಾಪುರ ವಿಧಾನಸಭಾ ಕ್ಷೇತ್ರಕ್ಕೆ ₹500 ಕೋಟಿಯಷ್ಟು ಅನುದಾನ ಹರಿದು ಬಂದಿದೆ ಎಂದು ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳಕರ ಹೇಳಿದರು.</p>.<p>ಇದರ ಪ್ರಯೋಜನ ಪಡೆದಿರುವ ತಾಲ್ಲೂಕಿನ ಸಾವಿರಾರು ಕುಟುಂಬಗಳು ಈಗ ನೆಮ್ಮದಿಯ ಜೀವನ ನಡೆಸುತ್ತಿವೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಸರ್ಕಾರ ಕಳೆದ 1000 ದಿನಗಳಲ್ಲಿ ಈ ಯೋಜನೆಗಳಿಗಾಗಿ ₹1.16 ಲಕ್ಷ ಕೋಟಿ ವ್ಯಯಿಸಿದ್ದು, ರಾಜ್ಯದ 1.37 ಕೋಟಿ ಕುಟುಂಬಗಳಿಗೆ ಇದರಿಂದ ಪ್ರಯೋಜನ ಸಿಕ್ಕಿದೆ. ನಮ್ಮ ತಾಲ್ಲೂಕಿಗೆ ಈ ಯೋಜನೆಗಳಡಿ ವಿತರಣೆಗೆ ಪ್ರತಿ ತಿಂಗಳು ₹20 ಕೋಟಿ ಅನುದಾನ ಲಭ್ಯವಾಗುತ್ತಿದ್ದು, ಗ್ಯಾರಂಟಿ ಯೋಜನೆಗಳು ಪ್ರಾರಂಭವಾಗಿ 27 ತಿಂಗಳಲ್ಲಿ ₹500 ಕೋಟಿಗೂ ಹೆಚ್ಚು ಹಣ ಲಭ್ಯವಾಗಿದೆ. ಈ ಮೂಲಕ ಬಡವರು, ಸಾಮಾನ್ಯರು, ಶ್ರಮಜೀವಿಗಳು, ಕಾರ್ಮಿಕರು, ರೈತರು ಮತ್ತು ಮಹಿಳೆಯರ ಸಬಲೀಕರಣಕ್ಕೆ ಪಕ್ಷ ಹೆಚ್ಚು ಒತ್ತು ನೀಡಿದೆ’ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>