ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಡೂರಿನ ವ್ಯಕ್ತಿ ಕೋವಿಡ್ ಲಸಿಕೆಯಿಂದ ಮೃತಪಟ್ಟಿಲ್ಲ: ಡಾ.ಕೆ. ಸುಧಾಕರ್

Last Updated 18 ಜನವರಿ 2021, 13:14 IST
ಅಕ್ಷರ ಗಾತ್ರ

ಬೆಳಗಾವಿ: ‘ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡ ಬಳಿಕ ಮೃತರಾದರು ಎನ್ನುವುದು ವದಂತಿಯಷ್ಟೆ. ಅವರಿಗೆ ಮಧುಮೇಹ ನ್ಯೂನತೆ ಇತ್ತು. ತೀವ್ರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸ್ಪಷ್ಟಪಡಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಲಸಿಕೆ ಪಡೆದ ಬಳಿಕ ಅವರಿಗೆ ಯಾವುದೇ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಸಂಪೂರ್ಣ ಮಾಹಿತಿ ನೀಡುತ್ತೇವೆ. ಲಸಿಕೆಯ ಅಡ್ಡ ಪರಿಣಾಮದಿಂದ ಹೀಗಾಗಿದೆ ಎಂದು ನನಗೆ ಅನಿಸುತ್ತಿಲ್ಲ’ ಎಂದರು.

‘ಇದುವರೆಗೆ ರಾಜ್ಯದಲ್ಲಿ 30 ಸಾವಿರ ಜನರು ಲಸಿಕೆ ತೆಗೆದುಕೊಂಡಿದ್ದಾರೆ. ಯಾರಿಗೂ ಅಡ್ಡ ಪರಿಣಾಮ ಆಗಿಲ್ಲ. 1ನೇ ಹಂತದಲ್ಲಿ ಯಶಸ್ವಿಯಾದ ಬಳಿಕ 2ನೇ ಹಂತಕ್ಕೆ ಹೋಗುತ್ತೇವೆ. ರಾಜ್ಯದಲ್ಲಿ ದಿನಕ್ಕೆ 80 ಸಾವಿರ ಮಂದಿಗೆ ಲಸಿಕೆ ನೀಡುವ ಗುರಿ ನೀಡಿದ್ದೇವೆ’ ಎಂದು ತಿಳಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು. ‘ಅವರು ನನ್ನ ಬಗ್ಗೆ ಮಾತನಾಡಿದ್ದಾರಾ?’ ಎಂದು ಕೇಳಿದರು.

‘ನಾನು ನನ್ನ ಕೆಲಸದಲ್ಲಿ ತೊಡಗಿದ್ದೇನೆ. ರಾಜ್ಯದ ಜನರ ಆರೋಗ್ಯವೇ ಮುಖ್ಯ. ಹೀಗಾಗಿ, ಕೋವಿಡ್ ಲಸಿಕೆ ಮೊದಲಾದ ಕಾರ್ಯದಲ್ಲಿ ನಿಗಾ ವಹಿಸಿದ್ದೇನೆ. ನಾನು ರಾಜಕೀಯ ಮಾಡುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT