15ಸಾವಿರ ಶಿಕ್ಷಕರ ನೇಮಕಾತಿಗಾಗಿ ಶಿಕ್ಷಣ ಇಲಾಖೆ ಮಾಡಿರುವ ಕರಡು ಪ್ರತಿಗೆ ಆಕ್ಷೇಪಣೆ ವ್ಯಕ್ತವಾಗುತ್ತಿದೆ. ಕರಡು ಪ್ರತಿಯಲ್ಲಿ ವೇತನ ಹಾಗೂ ಪದವಿ ತರಗತಿಯಲ್ಲಿನ ಉತ್ತೀರ್ಣತೆಯ ಶೇಕಡಾವಾರು ಮಾನದಂಡಗಳ ಬಗ್ಗೆ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚಿಗೆ ಕರಡು ಪ್ರತಿಯನ್ನು ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳನ್ನೂ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರ ಡಿ.10ರಂದು ರಾಜ್ಯಪತ್ರದಲ್ಲಿ ಪ್ರಕಟಿಸಿತ್ತು.