<p><strong>ಬೆಳಗಾವಿ:</strong>ಹಿಂಗಾರು ಬೆಳೆ ನಷ್ಟದ ಬಗ್ಗೆ ಜಂಟಿ ಅಧಿಕಾರಿಗಳು ನಡೆಸಿದ ಸಮೀಕ್ಷೆ ಬಹುತೇಕ ಕಡೆ ಪೂರ್ಣಗೊಂಡಿದೆ. ಇದನ್ನು ಕ್ರೋಢೀಕರಿಸಿ ಫೆಬ್ರುವರಿ ಮೊದಲ ವಾರದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ಸಂಪುಟದ ಉಪಸಮಿತಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದರು.</p>.<p>ತಾಲ್ಲೂಕಿನ ಪಂತ ಬಾಳೇಕುಂದ್ರಿಯಲ್ಲಿ ಬರ ಪರಿಹಾರ ಯೋಜನೆಯಡಿ ಹಸಿರು ಮೇವು ಉತ್ಪಾದನೆ ಮಾಡಿರುವುದನ್ನು ಮಂಗಳವಾರ ಬೆಳಿಗ್ಗೆ ಪರಿಶೀಲಿಸಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು.</p>.<p>ಹಿಂಗಾರು ಅವಧಿಯಲ್ಲಿ ರಾಜ್ಯದ 156 ತಾಲ್ಲೂಕುಗಳನ್ನು ಬರ ಪೀಡಿತವೆಂದು ಘೋಷಣೆ ಮಾಡಿದ್ದೇವೆ. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.</p>.<p>ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಅನುದಾನ ಒದಗಿಸಲಾಗುತ್ತಿದೆ. ನೀರು ಪೂರೈಸಲು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ತಂಡಗಳಿಗೆ ₹ 25 ಲಕ್ಷ ನೀಡಲಾಗಿದೆ. ಮೇವು ಪೂರೈಸಲು ಕೃಷಿ ಇಲಾಖೆಗೆ ₹ 25 ಕೋಟಿ ನೀಡಲಾಗಿದೆ ಎಂದು ವಿವರಿಸಿದರು.</p>.<p>ನೀರಿನ ಸೌಲಭ್ಯ ಇರುವ ರೈತರಿಗೆ ಮೇವು ಬೀಜಗಳ ಕಿಟ್ ನೀಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ 78,632 ಕಿಟ್ ನೀಡಲಾಗಿದೆ. ಅವಶ್ಯಕತೆ ಇರುವ ಕಡೆಗಳಲ್ಲಿ ಮೇವು ಬ್ಯಾಂಕ್ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.</p>.<p><strong>ಅನುದಾನ ಕೋರಿಕೆ:</strong>ಮುಂಗಾರು ಅವಧಿಯಲ್ಲಿ ರಾಜ್ಯದ 100 ತಾಲ್ಲೂಕುಗಳಲ್ಲಿ ಬರ ಆವರಿಸಿತ್ತು. ₹ 2,400 ಕೋಟಿ ಬೆಳೆ ನಷ್ಟ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong>ಹಿಂಗಾರು ಬೆಳೆ ನಷ್ಟದ ಬಗ್ಗೆ ಜಂಟಿ ಅಧಿಕಾರಿಗಳು ನಡೆಸಿದ ಸಮೀಕ್ಷೆ ಬಹುತೇಕ ಕಡೆ ಪೂರ್ಣಗೊಂಡಿದೆ. ಇದನ್ನು ಕ್ರೋಢೀಕರಿಸಿ ಫೆಬ್ರುವರಿ ಮೊದಲ ವಾರದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ಸಂಪುಟದ ಉಪಸಮಿತಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದರು.</p>.<p>ತಾಲ್ಲೂಕಿನ ಪಂತ ಬಾಳೇಕುಂದ್ರಿಯಲ್ಲಿ ಬರ ಪರಿಹಾರ ಯೋಜನೆಯಡಿ ಹಸಿರು ಮೇವು ಉತ್ಪಾದನೆ ಮಾಡಿರುವುದನ್ನು ಮಂಗಳವಾರ ಬೆಳಿಗ್ಗೆ ಪರಿಶೀಲಿಸಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು.</p>.<p>ಹಿಂಗಾರು ಅವಧಿಯಲ್ಲಿ ರಾಜ್ಯದ 156 ತಾಲ್ಲೂಕುಗಳನ್ನು ಬರ ಪೀಡಿತವೆಂದು ಘೋಷಣೆ ಮಾಡಿದ್ದೇವೆ. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.</p>.<p>ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಅನುದಾನ ಒದಗಿಸಲಾಗುತ್ತಿದೆ. ನೀರು ಪೂರೈಸಲು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ತಂಡಗಳಿಗೆ ₹ 25 ಲಕ್ಷ ನೀಡಲಾಗಿದೆ. ಮೇವು ಪೂರೈಸಲು ಕೃಷಿ ಇಲಾಖೆಗೆ ₹ 25 ಕೋಟಿ ನೀಡಲಾಗಿದೆ ಎಂದು ವಿವರಿಸಿದರು.</p>.<p>ನೀರಿನ ಸೌಲಭ್ಯ ಇರುವ ರೈತರಿಗೆ ಮೇವು ಬೀಜಗಳ ಕಿಟ್ ನೀಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ 78,632 ಕಿಟ್ ನೀಡಲಾಗಿದೆ. ಅವಶ್ಯಕತೆ ಇರುವ ಕಡೆಗಳಲ್ಲಿ ಮೇವು ಬ್ಯಾಂಕ್ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.</p>.<p><strong>ಅನುದಾನ ಕೋರಿಕೆ:</strong>ಮುಂಗಾರು ಅವಧಿಯಲ್ಲಿ ರಾಜ್ಯದ 100 ತಾಲ್ಲೂಕುಗಳಲ್ಲಿ ಬರ ಆವರಿಸಿತ್ತು. ₹ 2,400 ಕೋಟಿ ಬೆಳೆ ನಷ್ಟ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>