ಐಎಎಸ್ ಅಧಿಕಾರಿಗಳು ಸ್ಪೂರ್ತಿ: ‘ಉನ್ನತ ಅಧಿಕಾರಿ ಆಗಬೇಕು ಎಂಬ ಕನಸು ನನ್ನದು. ಆದರೆ ಯಾವ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು ಎಂಬ ಗೊಂಗಲದವಿತ್ತು. ಅಥಣಿ ಶುಗರ್ಸ್ ಕಂಪನಿಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ತಂದೆಯನ್ನು, 2013ರಲ್ಲಿ ವಿಧಾನಸಭೆ ಚುನಾವಣಾ ಕೆಲಸಕ್ಕೆ ನಿಯೋಜನೆಗೊಂಡಿದ್ದರು. ನಾನು ಸಹ ಅಲ್ಲಿಗೆ ಹೋಗಿದ್ದೆ. ಆಗ ಐಎಎಸ್ ಅಧಿಕಾರಿಗಳು ಆಡುತ್ತಿದ್ದ ಮಾತುಗಳ ನನಗೆ ಸ್ಫೂರ್ತಿ ನೀಡಿದವು. ಹೀಗಾಗಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಪ್ರಯತ್ನ ಮಾಡಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.