<p><strong>ಬೆಳಗಾವಿ</strong>: ‘ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ಅವುಗಳ ಮಾರಾಟ ಮಾಡುವವರನ್ನು ಹಾಗೂ ಮಾದಕ ವ್ಯಸನಿಗಳನ್ನು ಗುರುತಿಸಿ ತಡೆಗಟ್ಟುವುದು ಎಲ್ಲರ ಜವಾಬ್ದಾರಿ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ಸಂದೀಪ ಪಾಟೀಲ ಹೇಳಿದರು.</p>.<p>ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕರ್ನಾಟಕ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಶನಿವಾರ, ಇಲ್ಲಿನ ಸುವರ್ಣ ಸೌಧದಲ್ಲಿ ನಡೆದ ‘ಪರಿವರ್ತನೆ’ ಮಾದಕ ಮುಕ್ತ ಕರ್ನಾಟಕ ಅಭಿಯಾನ ಹಾಗೂ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುವಜನತೆ ವಿವಿಧ ಬಗೆಯ ಮಾದಕ ವಸ್ತುಗಳಿಗೆ ವ್ಯಸನಿಗಳಾಗುತ್ತಿದ್ದಾರೆ. ದುಶ್ಚಟಗಳಿಂದ ತಮ್ಮ ಜೀವನದ ಜೊತೆಗೆ ಕುಟುಂಬದ ನೆಮ್ಮದಿಯನ್ನು ಹಾಳುಮಾಡುತ್ತಿರುವುದು ಖೇದಕರ. ಮಾದಕ ವ್ಯಸನದ ಅಮಲಿನಲ್ಲಿ ಅನೇಕ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದರಿಂದ ಸಮಾಜದ ಸ್ವಾಸ್ಥ್ಯವು ಹಾಳಾಗುತ್ತಿದೆ’ ಎಂದರು.</p>.<p>ನಗರ ಪೊಲೀಸ್ ಆಯುಕ್ತ ಬೋರಸೆ ಭೂಷಣ ಗುಬರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಅಬಕಾರಿ ಉಪ ಆಯುಕ್ತೆ ಎಂ.ವನಜಾಕ್ಷೀ ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಬೆಳಗಾವಿ ಉತ್ತರ ವಲಯದ ಅಬಕಾರಿ ಇಲಾಖೆ ಉಪ ಆಯುಕ್ತೆ ಆರ್.ಎಸ್.ಸ್ವಪ್ನಾ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<p>ಮಾದಕ ವಸ್ತು ಮುಕ್ತ ಅಭಿಯಾನ ಹಾಗೂ ಸ್ವಚ್ಛತಾ ಹೀ ಸೇವಾ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ, ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಯಿತು.</p>.<div><blockquote>ಪ್ರಪಂಚದಾದ್ಯಂತ 190 ದಶಲಕ್ಷಕ್ಕೂ ಹೆಚ್ಚು ಮಾದಕ ವ್ಯಸನಿಗಳಿದ್ದಾರೆ. ಇದರಲ್ಲಿ ಅತಿ ಹೆಚ್ಚು ಯುವ ಜನಾಂಗ ಇರುವುದು ಆತಂಕಕಾರಿ </blockquote><span class="attribution">ಎಂ.ವನಜಾಕ್ಷೀ ಅಬಕಾರಿ ಉಪ ಆಯುಕ್ತೆ</span></div>.<div><blockquote>ನಮ್ಮ ಸುತ್ತ ಮಾದಕ ವಸ್ತುಗಳ ಕುರಿತು ಚಟುವಟಿಕೆಗಳನ್ನು ಕಂಡುಬಂದಲ್ಲಿ ಪೊಲೀಸ್ ಇಲಾಖೆಯ ಜಾಲತಾಣ ಅಥವಾ ಸಹಾಯವಾಣಿ ಸಂಖ್ಯೆ ಮೂಲಕ ತಿಳಿಸಬೇಕು </blockquote><span class="attribution">ಬೋರಸೆ ಭೂಷಣ ಗುಬರಾವ್ ನಗರ ಪೊಲೀಸ್ ಆಯುಕ್ತ</span></div>.<div><blockquote>ಮಾದಕ ವಸ್ತುಗಳ ಸೇವನೆ ಯುವ ಪೀಳಿಗೆಗೆ ಗರ್ವದ ಸಂಕೇತವಾಗಿದೆ. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡದೆ ಹೋದರೆ ಯುವ ಪೀಳಿಗೆ ನಾಶವಾಗಿ ಹೋಗುತ್ತದೆ</blockquote><span class="attribution"> ರಾಹುಲ್ ಶಿಂಧೆ ಸಿಇಒ ಜಿ.ಪಂ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ಅವುಗಳ ಮಾರಾಟ ಮಾಡುವವರನ್ನು ಹಾಗೂ ಮಾದಕ ವ್ಯಸನಿಗಳನ್ನು ಗುರುತಿಸಿ ತಡೆಗಟ್ಟುವುದು ಎಲ್ಲರ ಜವಾಬ್ದಾರಿ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ಸಂದೀಪ ಪಾಟೀಲ ಹೇಳಿದರು.</p>.<p>ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕರ್ನಾಟಕ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಶನಿವಾರ, ಇಲ್ಲಿನ ಸುವರ್ಣ ಸೌಧದಲ್ಲಿ ನಡೆದ ‘ಪರಿವರ್ತನೆ’ ಮಾದಕ ಮುಕ್ತ ಕರ್ನಾಟಕ ಅಭಿಯಾನ ಹಾಗೂ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುವಜನತೆ ವಿವಿಧ ಬಗೆಯ ಮಾದಕ ವಸ್ತುಗಳಿಗೆ ವ್ಯಸನಿಗಳಾಗುತ್ತಿದ್ದಾರೆ. ದುಶ್ಚಟಗಳಿಂದ ತಮ್ಮ ಜೀವನದ ಜೊತೆಗೆ ಕುಟುಂಬದ ನೆಮ್ಮದಿಯನ್ನು ಹಾಳುಮಾಡುತ್ತಿರುವುದು ಖೇದಕರ. ಮಾದಕ ವ್ಯಸನದ ಅಮಲಿನಲ್ಲಿ ಅನೇಕ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದರಿಂದ ಸಮಾಜದ ಸ್ವಾಸ್ಥ್ಯವು ಹಾಳಾಗುತ್ತಿದೆ’ ಎಂದರು.</p>.<p>ನಗರ ಪೊಲೀಸ್ ಆಯುಕ್ತ ಬೋರಸೆ ಭೂಷಣ ಗುಬರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಅಬಕಾರಿ ಉಪ ಆಯುಕ್ತೆ ಎಂ.ವನಜಾಕ್ಷೀ ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಬೆಳಗಾವಿ ಉತ್ತರ ವಲಯದ ಅಬಕಾರಿ ಇಲಾಖೆ ಉಪ ಆಯುಕ್ತೆ ಆರ್.ಎಸ್.ಸ್ವಪ್ನಾ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<p>ಮಾದಕ ವಸ್ತು ಮುಕ್ತ ಅಭಿಯಾನ ಹಾಗೂ ಸ್ವಚ್ಛತಾ ಹೀ ಸೇವಾ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ, ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಯಿತು.</p>.<div><blockquote>ಪ್ರಪಂಚದಾದ್ಯಂತ 190 ದಶಲಕ್ಷಕ್ಕೂ ಹೆಚ್ಚು ಮಾದಕ ವ್ಯಸನಿಗಳಿದ್ದಾರೆ. ಇದರಲ್ಲಿ ಅತಿ ಹೆಚ್ಚು ಯುವ ಜನಾಂಗ ಇರುವುದು ಆತಂಕಕಾರಿ </blockquote><span class="attribution">ಎಂ.ವನಜಾಕ್ಷೀ ಅಬಕಾರಿ ಉಪ ಆಯುಕ್ತೆ</span></div>.<div><blockquote>ನಮ್ಮ ಸುತ್ತ ಮಾದಕ ವಸ್ತುಗಳ ಕುರಿತು ಚಟುವಟಿಕೆಗಳನ್ನು ಕಂಡುಬಂದಲ್ಲಿ ಪೊಲೀಸ್ ಇಲಾಖೆಯ ಜಾಲತಾಣ ಅಥವಾ ಸಹಾಯವಾಣಿ ಸಂಖ್ಯೆ ಮೂಲಕ ತಿಳಿಸಬೇಕು </blockquote><span class="attribution">ಬೋರಸೆ ಭೂಷಣ ಗುಬರಾವ್ ನಗರ ಪೊಲೀಸ್ ಆಯುಕ್ತ</span></div>.<div><blockquote>ಮಾದಕ ವಸ್ತುಗಳ ಸೇವನೆ ಯುವ ಪೀಳಿಗೆಗೆ ಗರ್ವದ ಸಂಕೇತವಾಗಿದೆ. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡದೆ ಹೋದರೆ ಯುವ ಪೀಳಿಗೆ ನಾಶವಾಗಿ ಹೋಗುತ್ತದೆ</blockquote><span class="attribution"> ರಾಹುಲ್ ಶಿಂಧೆ ಸಿಇಒ ಜಿ.ಪಂ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>