ಸಂಕೇಶ್ವರ-ನರಗುಂದ ರಾಜ್ಯ ಹೆದ್ದಾರಿ ಹಾಗೂ ಜತ್ತ-ಜಾಂಬೋಟಿ ಅಂತರರಾಜ್ಯ ಹೆದ್ದಾರಿಯ ಭಾಗವಾಗಿರುವ ಲೋಳಸೂರ ಸೇತುವೆ ಮುಳುಗಡೆ ಆಗಿರುವುದರಿಂದ, ವಾಹನಗಳು ಪರ್ಯಾಯ ಮಾರ್ಗದ ಮೂಲಕ (40 ಕಿ.ಮೀ. ದೂರ ಕ್ರಮಿಸಿ) ಸಂಚರಿಸಬೇಕಾಗಿದೆ. ಡೋಹರ ಗಲ್ಲಿ, ಉಪ್ಪಾರ ಓಣಿ, ಕುಂಬಾರ ಓಣಿ, ಮೋಕಾಶಿ ಗಲ್ಲಿ, ಕಿಲ್ಲೆ, ಪುಂಡೀಕೇರಿ ಓಣಿ ಮೊದಲಾದ ತಗ್ಗು ಪ್ರದೇಶಗಳನ್ನು ಪ್ರವಾಹ ಆವರಿಸಿದೆ. ಜನ–ಜಾನುವಾರುಗಳನ್ನು ಸ್ಥಳಾಂತರಿಸಲಾಗಿದೆ. ತಾಲ್ಲೂಕು ಆಡಳಿತದಿಂದ ಎಪಿಎಂಸಿ ಆವರಣ, ಸರ್ಕಾರಿ ಕಾಲೇಜು, ನ್ಯೂ ಇಂಗ್ಲಿಷ್ ಶಾಲೆಯಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದಿದೆ. 500 ಮಂದಿ ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲಾಗಿದೆ.