<p><strong>ಹುಕ್ಕೇರಿ:</strong> ಹಿರೇಮಠದ ದಸರಾ ಉತ್ಸವವನ್ನು ಅ.15ರಿಂದ 24ರ ವರೆಗೆ ವಿಜೃಂಭಣೆಯಿಂದ ಆಚರಿಸಲು ಸಕಲ ಸದ್ಭಕ್ತರು ಸಹಕರಿಬೇಕು ಎಂದು ಉತ್ಸವ ಸಮಿತಿ ಅಧ್ಯಕ್ಷರೂ ಆದ, ಶಾಸಕ ನಿಖಿಲ್ ಕತ್ತಿ ಹೇಳಿದರು.</p>.<p>ಪಟ್ಟಣದ ಹಿರೇಮಠದಲ್ಲಿ ಸೋಮವಾರ ನಡೆದ ‘ಹಿರೇಮಠಧ ದಸರಾ ಉತ್ಸವ–2023’ ಭಿತ್ತಿಪತ್ರ ಬಿಡುಗಡೆ ಮತ್ತು ಮಠದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ, ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಸೇರಿದಂತೆ ನಾಡಿನ ಗಣ್ಯಮಾನ್ಯರು ದಸರಾದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಕತ್ತಿ ತಿಳಿಸಿದರು.</p>.<p>ರೇಣುಕ ಶ್ರೀ: ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ‘ರೇಣುಕ ಶ್ರೀ’ ಪ್ರಶಸ್ತಿಯನ್ನು ಈ ವರ್ಷ ನೊಣವಿನಕರೆ ಸೋಮಕಟ್ಟೆ ಕಾಡಸಿದ್ಧೇಶ್ವರ ಪೀಠಾಧ್ಯಕ್ಷ ಡಾ.ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿಗೆ ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿ ಫಲಕದ ಜತೆ ₹1ಲಕ್ಷ ನಗದು ಬಹುಮಾನ ಕೂಡಾ ಕೊಡಲಾಗುವುದು ಎಂದು ಸಭೆಗೆ ತಿಳಿಸಿದರು.</p>.<p>ಮಠಾಧ್ಯಕ್ಷ ಚಂದ್ರಶೇಖರ್ ಸ್ವಾಮೀಜಿ ಮಾತನಾಡಿದರು.</p>.<p>ಇದಕ್ಕೂ ಮೊದಲು ನಿವೃತ್ತ ಶಿಕ್ಷಕ ಎಸ್.ಐ.ಸಂಬಾಳ, ತುಬಚಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಪಿಂಟು ಶೆಟ್ಟಿ, ಪುರಸಭೆ ಸದಸ್ಯ ರಾಜು ಮುನ್ನೋಳಿ, ಮುಖಂಡ ಶಿವರಾಜ ನಾಯಿಕ, ನಿವೃತ್ತ ಪ್ರಾಧ್ಯಾಪಕ ಪಿ.ಜಿ.ಕೊಣ್ಣೂರ್ ಅಭಿಪ್ರಾಯ ತಿಳಿಸಿದರು.</p>.<p>ಭಕ್ತರಾದ ರೀಡ್ಸ್ ಸಂಸ್ಥೆಯ ಅಧ್ಯಕ್ಷ ಅಶೋಕ ಪಾಟೀಲ, ಚನ್ನಪ್ಪ ಗಜಬರ್, ಸುರೇಶ್ ಜಿನರಾಳಿ, ನಿವೃತ್ತ ಮುಖ್ಯ ಶಿಕ್ಷಕ ಬಿ.ಎಸ್.ಮುನ್ನೋಳಿ, ಅಣ್ಣಪ್ಪ ಸಂಬಾಳ, ನೀಲಪ್ಪ ಕೋಳಿ, ಬಸವರಾಜ ನಾಯಿಕ, ತಮ್ಮಣಗೌಡ ಪಾಟೀಲ ಇದ್ದರು. ಸುರೇಶ್ ಜಿನರಾಳಿ ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ಹಿರೇಮಠದ ದಸರಾ ಉತ್ಸವವನ್ನು ಅ.15ರಿಂದ 24ರ ವರೆಗೆ ವಿಜೃಂಭಣೆಯಿಂದ ಆಚರಿಸಲು ಸಕಲ ಸದ್ಭಕ್ತರು ಸಹಕರಿಬೇಕು ಎಂದು ಉತ್ಸವ ಸಮಿತಿ ಅಧ್ಯಕ್ಷರೂ ಆದ, ಶಾಸಕ ನಿಖಿಲ್ ಕತ್ತಿ ಹೇಳಿದರು.</p>.<p>ಪಟ್ಟಣದ ಹಿರೇಮಠದಲ್ಲಿ ಸೋಮವಾರ ನಡೆದ ‘ಹಿರೇಮಠಧ ದಸರಾ ಉತ್ಸವ–2023’ ಭಿತ್ತಿಪತ್ರ ಬಿಡುಗಡೆ ಮತ್ತು ಮಠದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ, ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಸೇರಿದಂತೆ ನಾಡಿನ ಗಣ್ಯಮಾನ್ಯರು ದಸರಾದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಕತ್ತಿ ತಿಳಿಸಿದರು.</p>.<p>ರೇಣುಕ ಶ್ರೀ: ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ‘ರೇಣುಕ ಶ್ರೀ’ ಪ್ರಶಸ್ತಿಯನ್ನು ಈ ವರ್ಷ ನೊಣವಿನಕರೆ ಸೋಮಕಟ್ಟೆ ಕಾಡಸಿದ್ಧೇಶ್ವರ ಪೀಠಾಧ್ಯಕ್ಷ ಡಾ.ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿಗೆ ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿ ಫಲಕದ ಜತೆ ₹1ಲಕ್ಷ ನಗದು ಬಹುಮಾನ ಕೂಡಾ ಕೊಡಲಾಗುವುದು ಎಂದು ಸಭೆಗೆ ತಿಳಿಸಿದರು.</p>.<p>ಮಠಾಧ್ಯಕ್ಷ ಚಂದ್ರಶೇಖರ್ ಸ್ವಾಮೀಜಿ ಮಾತನಾಡಿದರು.</p>.<p>ಇದಕ್ಕೂ ಮೊದಲು ನಿವೃತ್ತ ಶಿಕ್ಷಕ ಎಸ್.ಐ.ಸಂಬಾಳ, ತುಬಚಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಪಿಂಟು ಶೆಟ್ಟಿ, ಪುರಸಭೆ ಸದಸ್ಯ ರಾಜು ಮುನ್ನೋಳಿ, ಮುಖಂಡ ಶಿವರಾಜ ನಾಯಿಕ, ನಿವೃತ್ತ ಪ್ರಾಧ್ಯಾಪಕ ಪಿ.ಜಿ.ಕೊಣ್ಣೂರ್ ಅಭಿಪ್ರಾಯ ತಿಳಿಸಿದರು.</p>.<p>ಭಕ್ತರಾದ ರೀಡ್ಸ್ ಸಂಸ್ಥೆಯ ಅಧ್ಯಕ್ಷ ಅಶೋಕ ಪಾಟೀಲ, ಚನ್ನಪ್ಪ ಗಜಬರ್, ಸುರೇಶ್ ಜಿನರಾಳಿ, ನಿವೃತ್ತ ಮುಖ್ಯ ಶಿಕ್ಷಕ ಬಿ.ಎಸ್.ಮುನ್ನೋಳಿ, ಅಣ್ಣಪ್ಪ ಸಂಬಾಳ, ನೀಲಪ್ಪ ಕೋಳಿ, ಬಸವರಾಜ ನಾಯಿಕ, ತಮ್ಮಣಗೌಡ ಪಾಟೀಲ ಇದ್ದರು. ಸುರೇಶ್ ಜಿನರಾಳಿ ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>