<p><strong>ಬೆಳಗಾವಿ</strong>: ‘ಜಿಲ್ಲಾಧಿಕಾರಿ ಕಚೇರಿಯಲ್ಲಿ ‘ಕಾಗದ ರಹಿತ(ಪೇಪರ್ ಲೆಸ್)’ ವ್ಯವಸ್ಥೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ಕ್ರಮ ವಹಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.</p>.<p>‘ಅಗತ್ಯವಿರುವ ಡಿ.ಎಸ್. ಕಾರ್ಡ್, ಲ್ಯಾನ್ ವ್ಯವಸ್ಥೆಯನ್ನು ಒದಗಿಸಲಾಗಿದೆ. ಎಲ್ಲ ಶಾಖೆಗಳ ಸಿಬ್ಬಂದಿಗೆ ಅಗತ್ಯ ತರಬೇತಿ ಕೂಡ ನೀಡಲಾಗಿದೆ. ಕಾಗದರಹಿತ ಕಚೇರಿಯ ಆಶಯದಂತೆ ಇನ್ನು ಮುಂದೆ ಜಿಲ್ಲಾಧಿಕಾರಿ ಕಚೇರಿಯ ಕಡತಗಳು ಮತ್ತು ಪತ್ರಗಳನ್ನು ಕಡ್ಡಾಯವಾಗಿ ಇದೇ ವ್ಯವಸ್ಥೆಯಲ್ಲಿ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ’ ಎಂದಿದ್ದಾರೆ.</p>.<p>‘ಎಲ್ಲ ಶಾಖೆಗಳ ಶಿರಸ್ತೇದಾರರು ಮತ್ತು ವಿಷಯ ನಿರ್ವಾಹಕರು ಕಾಗದರಹಿತ ಕಚೇರಿ ವ್ಯವಸ್ಥೆಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಎಲ್ಲ ಶಾಖೆಗಳ ಮುಖ್ಯಸ್ಥರು ತಮ್ಮ ಅಧೀನ ಸಿಬ್ಬಂದಿಗೆ ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ತಾಂತ್ರಿಕ ಸಲಹೆ-ನೆರವು ಅಗತ್ಯವಿದ್ದಲ್ಲಿ ಸಿಬ್ಬಂದಿಗೆ ನೆರವು ಒದಗಿಸಲು ತಾಂತ್ರಿಕ ಸಮಾಲೋಚಕರನ್ನು ಕೂಡ ನೇಮಿಸಲಾಗಿದೆ. ಅಗತ್ಯವಿದ್ದರೆ ಅವರ ನೆರವು ಪಡೆದುಕೊಳ್ಳಬಹುದು. ಇ- ಆಫೀಸ್ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸದ ಸಿಬ್ಬಂದಿ ವಿರುದ್ಧ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಜಿಲ್ಲಾಧಿಕಾರಿ ಕಚೇರಿಯಲ್ಲಿ ‘ಕಾಗದ ರಹಿತ(ಪೇಪರ್ ಲೆಸ್)’ ವ್ಯವಸ್ಥೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ಕ್ರಮ ವಹಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.</p>.<p>‘ಅಗತ್ಯವಿರುವ ಡಿ.ಎಸ್. ಕಾರ್ಡ್, ಲ್ಯಾನ್ ವ್ಯವಸ್ಥೆಯನ್ನು ಒದಗಿಸಲಾಗಿದೆ. ಎಲ್ಲ ಶಾಖೆಗಳ ಸಿಬ್ಬಂದಿಗೆ ಅಗತ್ಯ ತರಬೇತಿ ಕೂಡ ನೀಡಲಾಗಿದೆ. ಕಾಗದರಹಿತ ಕಚೇರಿಯ ಆಶಯದಂತೆ ಇನ್ನು ಮುಂದೆ ಜಿಲ್ಲಾಧಿಕಾರಿ ಕಚೇರಿಯ ಕಡತಗಳು ಮತ್ತು ಪತ್ರಗಳನ್ನು ಕಡ್ಡಾಯವಾಗಿ ಇದೇ ವ್ಯವಸ್ಥೆಯಲ್ಲಿ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ’ ಎಂದಿದ್ದಾರೆ.</p>.<p>‘ಎಲ್ಲ ಶಾಖೆಗಳ ಶಿರಸ್ತೇದಾರರು ಮತ್ತು ವಿಷಯ ನಿರ್ವಾಹಕರು ಕಾಗದರಹಿತ ಕಚೇರಿ ವ್ಯವಸ್ಥೆಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಎಲ್ಲ ಶಾಖೆಗಳ ಮುಖ್ಯಸ್ಥರು ತಮ್ಮ ಅಧೀನ ಸಿಬ್ಬಂದಿಗೆ ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ತಾಂತ್ರಿಕ ಸಲಹೆ-ನೆರವು ಅಗತ್ಯವಿದ್ದಲ್ಲಿ ಸಿಬ್ಬಂದಿಗೆ ನೆರವು ಒದಗಿಸಲು ತಾಂತ್ರಿಕ ಸಮಾಲೋಚಕರನ್ನು ಕೂಡ ನೇಮಿಸಲಾಗಿದೆ. ಅಗತ್ಯವಿದ್ದರೆ ಅವರ ನೆರವು ಪಡೆದುಕೊಳ್ಳಬಹುದು. ಇ- ಆಫೀಸ್ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸದ ಸಿಬ್ಬಂದಿ ವಿರುದ್ಧ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>