ಪ್ರತಿ ವರ್ಷ ಹಬ್ಬದಂದು ನಗರದ ಅಂಜುಮನ್-ಇ-ಇಸ್ಲಾಂ ಸಂಸ್ಥೆ ಆವರಣದಲ್ಲಿರುವ ಈದ್ಗಾ ಮೈದಾನ, ಕೋಟೆ ಒಳಗಿರುವ ಮಸೀದಿ ಹಾಗೂ ಜಿಲ್ಲೆಯ ಎಲ್ಲ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಗುತ್ತಿತ್ತು. ಆದರೆ, ಕೊರೊನಾ ಸೋಂಕು ವ್ಯಾಪಿಸುತ್ತಿರುವುದನ್ನು ನಿಯಂತ್ರಿಸುವ ಉದ್ದೇಶದಿಂದ ಮುಸ್ಲಿಮರು ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸಿದರು. ‘ದೇಶವನ್ನು ಕೊರೊನಾ ಸಂಕಟದಿಂದ ಪಾರು ಮಾಡು. ಸೋಂಕಿನಿಂದ ಬಳಲುತ್ತಿರುವವರನ್ನು ರಕ್ಷಿಸು’ ಎಂದು ಕೋರಿದರು.