<p>ಬೆಳಗಾವಿ: ‘ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯಾ ಎಂಬ ಬಸವಣ್ಣನವರ ವಚನದಂತೆ ಶಿಕ್ಷಣದಿಂದ ಮಾತ್ರವೇ ಜನಸಮುದಾಯದ ಪ್ರಗತಿ ಸಾಧ್ಯ. ಹೀಗಾಗಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚಿನ ಸುಧಾರಣೆ ಆಗಬೇಕು’ ಎಂದು ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ರಾಮತೀರ್ಥ ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ವಿವಿಧ ಸಾಂಸ್ಕೃತಿಕ ಸಂಘಗಳ ಉದ್ಘಾಟನೆ ಹಾಗೂ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವು ಯಶಸ್ವಿಯಾಗಲು ಶಿಕ್ಷಣ ಇಲಾಖೆಯೊಂದಿಗೆ ಪಾಲಕರು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು’ ಎಂದರು.</p>.<p>‘ಈ ಶಾಲೆಗೆ 4 ಶೌಚಾಲಯಗಳನ್ನು ಕಟ್ಟಿಸಿಕೊಟ್ಟ ಮುಖಂಡ ಸುರೇಶ ಯಾದವ ಅವರ ಕಾರ್ಯ ಅಭಿನಂದನಾರ್ಹ’ ಎಂದು ಹೇಳಿದರು.</p>.<p>ನಗರ ಬಿಇಒ ರವಿ ಭಜಂತ್ರಿ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ, ಮಧ್ಯಮ ವರ್ಗದ ಮಕ್ಕಳು ಶಿಕ್ಷಣ ಪಡೆಯುತ್ತಾರೆ. ಆ ಸಮುದಾಯಗಳ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ನಿರಂತರವಾಗಿ ಪ್ರಯತ್ನಿಸುತ್ತಿದೆ. ಆಯಾ ಭಾಗದ ಸಾರ್ವಜನಿಕರ ಸಹಕಾರ ಶಾಲೆಗಳಿಗೆ ಮತ್ತಷ್ಟು ಶಕ್ತಿ ನೀಡಬಲ್ಲದು’ ಎಂದರು.</p>.<p>ಸುರೇಶ ಯಾದವ ಪ್ರತಿಷ್ಠಾನದ ಅಧ್ಯಕ್ಷ ಸುರೇಶ ಯಾದವ, ರೋಟರಿ ಕ್ಲಬ್ (ಉತ್ತರ) ಅಧ್ಯಕ್ಷ ಅಭಯಕುಮಾರ ಮತ್ತು ನಗರಪಾಲಿಕೆ ಸದಸ್ಯ ಹಣಮಂತ<br />ಕೊಂಗಾಲಿ ಅವರನ್ನು ಸತ್ಕರಿಸಲಾಯಿತು.</p>.<p>ಮುಖಂಡ ಎಸ್.ಎ. ಕಿವಡಸನ್ನವರ, ಮುಖ್ಯಶಿಕ್ಷಕಿ ಎನ್.ಆರ್. ಮೆಳವಂಕಿ, ಎಚ್.ಎ. ಮುಲ್ಲಾ, ಎಂ.ಎಸ್. ವಾಲಿ ಉಪಸ್ಥಿತರಿದ್ದರು.</p>.<p>ಐ.ಡಿ. ಹಿರೇಮಠ ಸ್ವಾಗತಿಸಿದರು. ಎಂ.ವೈ. ಕಟಕೋಳ ನಿರೂಪಿಸಿದರು. ಎಂ.ಎಸ್. ತುರಮರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯಾ ಎಂಬ ಬಸವಣ್ಣನವರ ವಚನದಂತೆ ಶಿಕ್ಷಣದಿಂದ ಮಾತ್ರವೇ ಜನಸಮುದಾಯದ ಪ್ರಗತಿ ಸಾಧ್ಯ. ಹೀಗಾಗಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚಿನ ಸುಧಾರಣೆ ಆಗಬೇಕು’ ಎಂದು ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ರಾಮತೀರ್ಥ ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ವಿವಿಧ ಸಾಂಸ್ಕೃತಿಕ ಸಂಘಗಳ ಉದ್ಘಾಟನೆ ಹಾಗೂ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವು ಯಶಸ್ವಿಯಾಗಲು ಶಿಕ್ಷಣ ಇಲಾಖೆಯೊಂದಿಗೆ ಪಾಲಕರು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು’ ಎಂದರು.</p>.<p>‘ಈ ಶಾಲೆಗೆ 4 ಶೌಚಾಲಯಗಳನ್ನು ಕಟ್ಟಿಸಿಕೊಟ್ಟ ಮುಖಂಡ ಸುರೇಶ ಯಾದವ ಅವರ ಕಾರ್ಯ ಅಭಿನಂದನಾರ್ಹ’ ಎಂದು ಹೇಳಿದರು.</p>.<p>ನಗರ ಬಿಇಒ ರವಿ ಭಜಂತ್ರಿ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ, ಮಧ್ಯಮ ವರ್ಗದ ಮಕ್ಕಳು ಶಿಕ್ಷಣ ಪಡೆಯುತ್ತಾರೆ. ಆ ಸಮುದಾಯಗಳ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ನಿರಂತರವಾಗಿ ಪ್ರಯತ್ನಿಸುತ್ತಿದೆ. ಆಯಾ ಭಾಗದ ಸಾರ್ವಜನಿಕರ ಸಹಕಾರ ಶಾಲೆಗಳಿಗೆ ಮತ್ತಷ್ಟು ಶಕ್ತಿ ನೀಡಬಲ್ಲದು’ ಎಂದರು.</p>.<p>ಸುರೇಶ ಯಾದವ ಪ್ರತಿಷ್ಠಾನದ ಅಧ್ಯಕ್ಷ ಸುರೇಶ ಯಾದವ, ರೋಟರಿ ಕ್ಲಬ್ (ಉತ್ತರ) ಅಧ್ಯಕ್ಷ ಅಭಯಕುಮಾರ ಮತ್ತು ನಗರಪಾಲಿಕೆ ಸದಸ್ಯ ಹಣಮಂತ<br />ಕೊಂಗಾಲಿ ಅವರನ್ನು ಸತ್ಕರಿಸಲಾಯಿತು.</p>.<p>ಮುಖಂಡ ಎಸ್.ಎ. ಕಿವಡಸನ್ನವರ, ಮುಖ್ಯಶಿಕ್ಷಕಿ ಎನ್.ಆರ್. ಮೆಳವಂಕಿ, ಎಚ್.ಎ. ಮುಲ್ಲಾ, ಎಂ.ಎಸ್. ವಾಲಿ ಉಪಸ್ಥಿತರಿದ್ದರು.</p>.<p>ಐ.ಡಿ. ಹಿರೇಮಠ ಸ್ವಾಗತಿಸಿದರು. ಎಂ.ವೈ. ಕಟಕೋಳ ನಿರೂಪಿಸಿದರು. ಎಂ.ಎಸ್. ತುರಮರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>