ಗುತ್ತಲ: ಸಮೀಪದ ತುಂಗಭದ್ರಾ ನದಿಯಿಂದ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ 2 ಲಾರಿಗಳನ್ನು ಉಪತಹಶೀಲ್ದಾರ್ ಗವಿಸಿದ್ಧಪ್ಪ ದ್ಯಾಮಣ್ಣನವರ ಮಾರ್ಗದರ್ಶನದಲ್ಲಿ ಮಂಗಳವಾರ ವಶಪಡಿಸಿಕೊಳ್ಳಲಾಗಿದೆ.ಕಾರ್ಯಾಚರಣೆಯಲ್ಲಿ ಕಂದಾಯ ನಿರೀಕ್ಷಕ ಆರ್.ಎಸ್.ಮಲ್ಲಾಡದ, ಗ್ರಾಮ ಲೆಕ್ಕಾಧಿಕಾರಿ ಫಕ್ಕಿರೇಶ ಬಾರ್ಕಿ, ಸಬ್ಇನ್ಸ್ಪೆಕ್ಟರ್ ಬಸವರಾಜ ಕಾಮನಬೈಲ ಇದ್ದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.