<p><strong>ಬೆಳಗಾವಿ:</strong> ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನ ಪ್ರಯುಕ್ತ, ಈದ್–ಮಿಲಾದ್ ಮೆರವಣಿಗೆ ನಗರದಲ್ಲಿ ಭಾನುವಾರ ಸಡಗರದಿಂದ ನಡೆಯಿತು. ಮುಸ್ಲಿಮರೊಂದಿಗೆ ಹಿಂದೂಗಳು ಭಾಗವಹಿಸಿದ್ದು ಭಾವೈಕ್ಯದ ಕ್ಷಣಕ್ಕೆ ಸಾಕ್ಷಿಯಾಯಿತು. </p><p>ಸೆ.5ರಂದು ಈದ್–ಮಿಲಾದ್ ಮೆರವಣಿಗೆ ನಿಗದಿಯಾಗಿತ್ತು. ಆದರೆ, ಮಾರನೇ ದಿನವಾದ ಸೆ.6ರಂದೇ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಇತ್ತು.</p><p>ಸತತ ಎರಡೂ ದಿನ ಮೆರವಣಿಗೆ ನಡೆದರೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಕಷ್ಟವಾಗುತ್ತದೆ ಎಂದು ಈದ್–ಮಿಲಾದ್ ಮೆರವಣಿಗೆಯನ್ನು ಸೆ.14ಕ್ಕೆ ಮುಂದೂಡಿದ್ದರು. ಜತೆಗೆ, ಗಣೇಶ ಮೂರ್ತಿಗಳ ಮೆರವಣಿಗೆಯಲ್ಲಿ ಪಾಲ್ಗೊಂಡು ಸಾಮರಸ್ಯ ಮೆರೆದಿದ್ದರು.</p><p>ಹಾಗಾಗಿ ಭಾನುವಾರ ಸಾವಿರಾರು ಜನರೊಂದಿಗೆ ಅದ್ದೂರಿಯಾಗಿ ಈದ್ ಮೆರವಣಿಗೆ ನಡೆಸಿದರು. ಇದರಲ್ಲಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಪ್ರಮುಖರು ಪಾಲ್ಗೊಂಡರು.</p><p>ಹಳೇ ಪಿ.ಬಿ. ರಸ್ತೆಯಿಂದ ಆರಂಭಗೊಂಡ ಮೆರವಣಿಗೆ ಕೇಂದ್ರೀಯ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತ, ರಾಣಿ ಚನ್ನಮ್ಮನ ವೃತ್ತ, ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ವೃತ್ತ ಮಾರ್ಗವಾಗಿ ಸಾಗಿ, ಕ್ಯಾಂಪ್ ಪ್ರದೇಶದಲ್ಲಿನ ಹಜರತ್ ಸೈಯದ್ ಅಸದ್ಖಾನ್ ದರ್ಗಾ ಆವರಣ ತಲುಪಲಿದೆ.</p><p>ಮೆರವಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ಸಂಭ್ರಮ ಮನೆಮಾಡಿತ್ತು. ಇಸ್ಲಾಂ ಧರ್ಮದ ಧ್ವಜಗಳು ರಾರಾಜಿಸಿದವು. ಸಾಂಪ್ರದಾಯಿಕ ದಿರಿಸಿನಲ್ಲಿ ಪುಟಾಣಿಗಳು ಕಣ್ಮನಸೆಳೆದರು. ಮೆರವಣಿಗೆಯುದ್ದಕ್ಕೂ ‘ಕವ್ವಾಲಿ’ಗಳು ಅನುರಣಿಸಿದವು. ಸಂಗೀತ ವಾದ್ಯಗಳ ಅಬ್ಬರವೂ ಜೋರಾಗಿತ್ತು.</p><p>ವಿವಿಧ ಸಂಘಟನೆಯವರು ಮತ್ತು ಮುಸ್ಲಿಮರು ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಬಾಳೆಹಣ್ಣು, ಐಸ್ಕ್ರೀಮ್, ಲಡ್ಡು, ಕುಡಿಯುವ ನೀರು ಮತ್ತು ಶರಬತ್ ವಿತರಿಸಿದರು.</p><p>ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಧರ್ಮಗುರು ಮುಫ್ತಿ ಮಂಜೂರ್ ಆಲಂ ಅವರು ಹಬ್ಬದ ಸಂದೇಶ ಸಾರಿದರು.</p>. <p>ಶಾಸಕ ಆಸೀಫ್ ಸೇಠ್, ‘ಮುಹಮ್ಮದ್ ಪೈಗಂಬರರು ಹಾಕಿಕೊಟ್ಟ ದಾರಿಯಲ್ಲಿ ಎಲ್ಲರೂ ಸಾಗೋಣ. ಹಿರಿಯರು ಅದರಲ್ಲೂ ಹೆತ್ತವರನ್ನು ಗೌರವಿಸೋಣ. ಪ್ರೀತಿ, ಸಹಬಾಳ್ವೆಯಿಂದ ಸಮಾಜದಲ್ಲಿ ಬಾಳೋಣ’ ಎಂದರು.</p><p>ಮಾಜಿ ಶಾಸಕ ಫಿರೋಜ್ ಸೇಠ್, ‘ಗಣೇಶ ಮೂರ್ತಿಗಳ ಮೆರವಣಿಗೆ ಸುಗಮವಾಗಿ ನಡೆಯಲೆಂದು ಮುಸ್ಲಿಮರು ಈದ್–ಮಿಲಾದ್ ಮೆರವಣಿಗೆ ಮುಂದೂಡಿ, ದೇಶಕ್ಕೆ ಭಾವೈಕ್ಯದ ಸಂದೇಶ ಕೊಟ್ಟಿದ್ದೀರಿ. ಬೆಳಗಾವಿಯಲ್ಲಿ ಹಿಂದೂ–ಮುಸ್ಲಿಮರು ಸಹೋದರರಂತೆ ಇದ್ದೇವೆ ಎಂದು ನಿರೂಪಿಸಿದ್ದೀರಿ. ಈ ಸಂಪ್ರದಾಯ ಹೀಗೆ ಮುಂದುವರಿಸೋಣ. ಬಡವರಿಗೆ ಸಹಾಯಹಸ್ತ ಚಾಚೋಣ’ ಎಂದರು.</p><p>ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ಮಾತನಾಡಿದರು.</p><p>ಧರ್ಮಗುರು ಪೀರಸಾಬ್ ಸಯ್ಯದ್ ಕಾಶೀಮ್ ಅಶ್ರಫ್, ನಗರ ಪೊಲೀಸ್ ಉಪ ಆಯುಕ್ತ(ಕಾನೂನು ಮತ್ತು ಸುವ್ಯವಸ್ಥೆ) ನಾರಾಯಣ ಭರಮನಿ, ಮುಖಂಡರಾದ ಫೈಜಾನ್ ಸೇಠ್, ಅಮನ್ ಸೇಠ್, ವಿಕಾಸ ಕಲಘಟಗಿ, ರಂಜೀತ ಚವ್ಹಾಣಪಾಟೀಲ ಇತರರಿದ್ದರು.</p><p>ಪೊಲೀಸರು ಇಡೀ ನಗರದಾದ್ಯಂತ ಭದ್ರತೆ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನ ಪ್ರಯುಕ್ತ, ಈದ್–ಮಿಲಾದ್ ಮೆರವಣಿಗೆ ನಗರದಲ್ಲಿ ಭಾನುವಾರ ಸಡಗರದಿಂದ ನಡೆಯಿತು. ಮುಸ್ಲಿಮರೊಂದಿಗೆ ಹಿಂದೂಗಳು ಭಾಗವಹಿಸಿದ್ದು ಭಾವೈಕ್ಯದ ಕ್ಷಣಕ್ಕೆ ಸಾಕ್ಷಿಯಾಯಿತು. </p><p>ಸೆ.5ರಂದು ಈದ್–ಮಿಲಾದ್ ಮೆರವಣಿಗೆ ನಿಗದಿಯಾಗಿತ್ತು. ಆದರೆ, ಮಾರನೇ ದಿನವಾದ ಸೆ.6ರಂದೇ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಇತ್ತು.</p><p>ಸತತ ಎರಡೂ ದಿನ ಮೆರವಣಿಗೆ ನಡೆದರೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಕಷ್ಟವಾಗುತ್ತದೆ ಎಂದು ಈದ್–ಮಿಲಾದ್ ಮೆರವಣಿಗೆಯನ್ನು ಸೆ.14ಕ್ಕೆ ಮುಂದೂಡಿದ್ದರು. ಜತೆಗೆ, ಗಣೇಶ ಮೂರ್ತಿಗಳ ಮೆರವಣಿಗೆಯಲ್ಲಿ ಪಾಲ್ಗೊಂಡು ಸಾಮರಸ್ಯ ಮೆರೆದಿದ್ದರು.</p><p>ಹಾಗಾಗಿ ಭಾನುವಾರ ಸಾವಿರಾರು ಜನರೊಂದಿಗೆ ಅದ್ದೂರಿಯಾಗಿ ಈದ್ ಮೆರವಣಿಗೆ ನಡೆಸಿದರು. ಇದರಲ್ಲಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಪ್ರಮುಖರು ಪಾಲ್ಗೊಂಡರು.</p><p>ಹಳೇ ಪಿ.ಬಿ. ರಸ್ತೆಯಿಂದ ಆರಂಭಗೊಂಡ ಮೆರವಣಿಗೆ ಕೇಂದ್ರೀಯ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತ, ರಾಣಿ ಚನ್ನಮ್ಮನ ವೃತ್ತ, ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ವೃತ್ತ ಮಾರ್ಗವಾಗಿ ಸಾಗಿ, ಕ್ಯಾಂಪ್ ಪ್ರದೇಶದಲ್ಲಿನ ಹಜರತ್ ಸೈಯದ್ ಅಸದ್ಖಾನ್ ದರ್ಗಾ ಆವರಣ ತಲುಪಲಿದೆ.</p><p>ಮೆರವಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ಸಂಭ್ರಮ ಮನೆಮಾಡಿತ್ತು. ಇಸ್ಲಾಂ ಧರ್ಮದ ಧ್ವಜಗಳು ರಾರಾಜಿಸಿದವು. ಸಾಂಪ್ರದಾಯಿಕ ದಿರಿಸಿನಲ್ಲಿ ಪುಟಾಣಿಗಳು ಕಣ್ಮನಸೆಳೆದರು. ಮೆರವಣಿಗೆಯುದ್ದಕ್ಕೂ ‘ಕವ್ವಾಲಿ’ಗಳು ಅನುರಣಿಸಿದವು. ಸಂಗೀತ ವಾದ್ಯಗಳ ಅಬ್ಬರವೂ ಜೋರಾಗಿತ್ತು.</p><p>ವಿವಿಧ ಸಂಘಟನೆಯವರು ಮತ್ತು ಮುಸ್ಲಿಮರು ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಬಾಳೆಹಣ್ಣು, ಐಸ್ಕ್ರೀಮ್, ಲಡ್ಡು, ಕುಡಿಯುವ ನೀರು ಮತ್ತು ಶರಬತ್ ವಿತರಿಸಿದರು.</p><p>ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಧರ್ಮಗುರು ಮುಫ್ತಿ ಮಂಜೂರ್ ಆಲಂ ಅವರು ಹಬ್ಬದ ಸಂದೇಶ ಸಾರಿದರು.</p>. <p>ಶಾಸಕ ಆಸೀಫ್ ಸೇಠ್, ‘ಮುಹಮ್ಮದ್ ಪೈಗಂಬರರು ಹಾಕಿಕೊಟ್ಟ ದಾರಿಯಲ್ಲಿ ಎಲ್ಲರೂ ಸಾಗೋಣ. ಹಿರಿಯರು ಅದರಲ್ಲೂ ಹೆತ್ತವರನ್ನು ಗೌರವಿಸೋಣ. ಪ್ರೀತಿ, ಸಹಬಾಳ್ವೆಯಿಂದ ಸಮಾಜದಲ್ಲಿ ಬಾಳೋಣ’ ಎಂದರು.</p><p>ಮಾಜಿ ಶಾಸಕ ಫಿರೋಜ್ ಸೇಠ್, ‘ಗಣೇಶ ಮೂರ್ತಿಗಳ ಮೆರವಣಿಗೆ ಸುಗಮವಾಗಿ ನಡೆಯಲೆಂದು ಮುಸ್ಲಿಮರು ಈದ್–ಮಿಲಾದ್ ಮೆರವಣಿಗೆ ಮುಂದೂಡಿ, ದೇಶಕ್ಕೆ ಭಾವೈಕ್ಯದ ಸಂದೇಶ ಕೊಟ್ಟಿದ್ದೀರಿ. ಬೆಳಗಾವಿಯಲ್ಲಿ ಹಿಂದೂ–ಮುಸ್ಲಿಮರು ಸಹೋದರರಂತೆ ಇದ್ದೇವೆ ಎಂದು ನಿರೂಪಿಸಿದ್ದೀರಿ. ಈ ಸಂಪ್ರದಾಯ ಹೀಗೆ ಮುಂದುವರಿಸೋಣ. ಬಡವರಿಗೆ ಸಹಾಯಹಸ್ತ ಚಾಚೋಣ’ ಎಂದರು.</p><p>ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ಮಾತನಾಡಿದರು.</p><p>ಧರ್ಮಗುರು ಪೀರಸಾಬ್ ಸಯ್ಯದ್ ಕಾಶೀಮ್ ಅಶ್ರಫ್, ನಗರ ಪೊಲೀಸ್ ಉಪ ಆಯುಕ್ತ(ಕಾನೂನು ಮತ್ತು ಸುವ್ಯವಸ್ಥೆ) ನಾರಾಯಣ ಭರಮನಿ, ಮುಖಂಡರಾದ ಫೈಜಾನ್ ಸೇಠ್, ಅಮನ್ ಸೇಠ್, ವಿಕಾಸ ಕಲಘಟಗಿ, ರಂಜೀತ ಚವ್ಹಾಣಪಾಟೀಲ ಇತರರಿದ್ದರು.</p><p>ಪೊಲೀಸರು ಇಡೀ ನಗರದಾದ್ಯಂತ ಭದ್ರತೆ ಕೈಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>