<p><strong>ಬೆಳಗಾವಿ:</strong> ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ ಅಂಗವಾಗಿ, ನಗರದಲ್ಲಿ ‘ಮೈ ಭಾರತ’ ಕೇಂದ್ರದ ಸಹಯೋಗದೊಂದಿಗೆ ನ.19ರಂದು ‘ಏಕತಾ ನಡಿಗೆ’ ಹಮ್ಮಿಕೊಂಡಿದ್ದೇವೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>‘ಅಂದು ಬೆಳಿಗ್ಗೆ 7ಕ್ಕೆ ಶಹಾಪುರದ ಶಿವಾಜಿ ಉದ್ಯಾನದಿಂದ ಆರಂಭವಾಗುವ ನಡಿಗೆ ಪಾಟೀಲ ಗಲ್ಲಿಯ ಶನಿ ಮಂದಿರ, ಟಿಳಕ ಚೌಕ್, ರಾಮಲಿಂಗಖಿಂಡ ಗಲ್ಲಿ ಮಾರ್ಗವಾಗಿ ಸಾಗಿ, ಧರ್ಮವೀರ ಸಂಭಾಜಿ ವೃತ್ತ ತಲುಪಲಿದೆ’ ಎಂದು ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p>.<p>‘ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಬಗ್ಗೆ ದೇಶದಲ್ಲಿ ಜನರಲ್ಲಿ ವಿಶ್ವಾಸವಿದೆ. ಹಾಗಾಗಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಆದರೆ, ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್ನವರು ಆಧಾರ ರಹಿತವಾಗಿ ನಮ್ಮ ಪಕ್ಷವನ್ನು ಟೀಕಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ಕಾಂಗ್ರೆಸ್ನವರಿಗೆ ಈಗ ಯಾವ ವರ್ಗಗಳ ಬೆಂಬಲವೂ ಇಲ್ಲ. ಮುಸ್ಲಿಮರು ಮತಗಳೂ ಈಗ ಬಿಜೆಪಿಗೆ ಬಂದಿವೆ. ಈ ಬಗ್ಗೆ ಆ ಪಕ್ಷದವರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.</p>.<p>‘ವಿದ್ಯುನ್ಮಾನ ಮತಯಂತ್ರಗಳ ಕಾರ್ಯನಿರ್ವಹಣೆ ಬಗ್ಗೆ ಕಾಂಗ್ರೆಸ್ನವರಿಗೆ ಸಂಶಯವಿದ್ದರೆ ದೂರು ನೀಡಬೇಕು. ಕೇವಲ ಮೌಖಿಕವಾಗಿ ದೂರಿದರೆ ಸಾಲದು’ ಎಂದ ಶೆಟ್ಟರ್, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶೀಘ್ರ 100ನೇ ಸೋಲಿನ ಸಂಭ್ರಮಾಚರಣೆ ಮಾಡಿಕೊಳ್ಳುತ್ತಾರೆ’ ಎಂದು ವ್ಯಂಗ್ಯವಾಡಿದರು.</p>.<p>ಮೇಯರ್ ಮಂಗೇಶ ಪವಾರ, ಉಪಮೇಯರ್ ವಾಣಿ ಜೋಶಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ ಅಂಗವಾಗಿ, ನಗರದಲ್ಲಿ ‘ಮೈ ಭಾರತ’ ಕೇಂದ್ರದ ಸಹಯೋಗದೊಂದಿಗೆ ನ.19ರಂದು ‘ಏಕತಾ ನಡಿಗೆ’ ಹಮ್ಮಿಕೊಂಡಿದ್ದೇವೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>‘ಅಂದು ಬೆಳಿಗ್ಗೆ 7ಕ್ಕೆ ಶಹಾಪುರದ ಶಿವಾಜಿ ಉದ್ಯಾನದಿಂದ ಆರಂಭವಾಗುವ ನಡಿಗೆ ಪಾಟೀಲ ಗಲ್ಲಿಯ ಶನಿ ಮಂದಿರ, ಟಿಳಕ ಚೌಕ್, ರಾಮಲಿಂಗಖಿಂಡ ಗಲ್ಲಿ ಮಾರ್ಗವಾಗಿ ಸಾಗಿ, ಧರ್ಮವೀರ ಸಂಭಾಜಿ ವೃತ್ತ ತಲುಪಲಿದೆ’ ಎಂದು ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p>.<p>‘ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಬಗ್ಗೆ ದೇಶದಲ್ಲಿ ಜನರಲ್ಲಿ ವಿಶ್ವಾಸವಿದೆ. ಹಾಗಾಗಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಆದರೆ, ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್ನವರು ಆಧಾರ ರಹಿತವಾಗಿ ನಮ್ಮ ಪಕ್ಷವನ್ನು ಟೀಕಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ಕಾಂಗ್ರೆಸ್ನವರಿಗೆ ಈಗ ಯಾವ ವರ್ಗಗಳ ಬೆಂಬಲವೂ ಇಲ್ಲ. ಮುಸ್ಲಿಮರು ಮತಗಳೂ ಈಗ ಬಿಜೆಪಿಗೆ ಬಂದಿವೆ. ಈ ಬಗ್ಗೆ ಆ ಪಕ್ಷದವರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.</p>.<p>‘ವಿದ್ಯುನ್ಮಾನ ಮತಯಂತ್ರಗಳ ಕಾರ್ಯನಿರ್ವಹಣೆ ಬಗ್ಗೆ ಕಾಂಗ್ರೆಸ್ನವರಿಗೆ ಸಂಶಯವಿದ್ದರೆ ದೂರು ನೀಡಬೇಕು. ಕೇವಲ ಮೌಖಿಕವಾಗಿ ದೂರಿದರೆ ಸಾಲದು’ ಎಂದ ಶೆಟ್ಟರ್, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶೀಘ್ರ 100ನೇ ಸೋಲಿನ ಸಂಭ್ರಮಾಚರಣೆ ಮಾಡಿಕೊಳ್ಳುತ್ತಾರೆ’ ಎಂದು ವ್ಯಂಗ್ಯವಾಡಿದರು.</p>.<p>ಮೇಯರ್ ಮಂಗೇಶ ಪವಾರ, ಉಪಮೇಯರ್ ವಾಣಿ ಜೋಶಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>