ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏ.3 ರಂದು ಜಗದೀಶ ಶೆಟ್ಟರ್‌ ಪರ ಚುನಾವಣೆ ಪ್ರಚಾರ ಸಭೆ: ಡಾ.ವಿಶ್ವನಾಥ ಪಾಟೀಲ

Published 31 ಮಾರ್ಚ್ 2024, 14:02 IST
Last Updated 31 ಮಾರ್ಚ್ 2024, 14:02 IST
ಅಕ್ಷರ ಗಾತ್ರ

ಬೈಲಹೊಂಗಲ: ಬೆಳಗಾವಿ ಲೋಕಸಭಾ ಚುಣಾವಣೆಯ ಬಿಜೆಪಿ, ಜೆಡಿಎಸ್ ಮಿತ್ರ ಪಕ್ಷದ ಅಭ್ಯರ್ಥಿ ಜಗದೀಶ ಶೆಟ್ಟರ್‌ ಅವರ ಪರ ಚುನಾವಣೆ ಪ್ರಚಾರ ಸಭೆಯನ್ನು ಏ. 3 ರಂದು ಸಂಜೆ 4ಕ್ಕೆ ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯಲ್ಲಿ ಏರ್ಪಡಿಸಲಾಗಿದೆ ಎಂದು ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ ಹೇಳಿದರು.

ಪಟ್ಟಣದ ವಿಜಯ ಸೊಸಿಯಲ್ ಕ್ಲಬ್‍ನಲ್ಲಿ ಭಾನುವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಪಕ್ಷದ ಅಭ್ಯರ್ಥಿ ಯಾರೇ ಆದರೂ ಗೆಲ್ಲಿಸುವ ಗುರಿ ನಮ್ಮದಾಗಿದೆ. ಈ ಬಾರಿ ಬೈಲಹೊಂಗಲ ಮತಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳನ್ನು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ನಾವೆಲ್ಲರು ಒಗ್ಗಟ್ಟಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.

ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ಜಿಲ್ಲೆಯಲ್ಲಿ ಏನಾದರೂ ಸಮಸ್ಯೆ ತಲೆದೋರಿದರೆ ಇದನ್ನು ಸರಿಪಡಿಸಲು ಕಮಿಟಿ ರಚಿಸಲಾಗಿದೆ. 28 ಲೋಕಸಭಾ ಕ್ಷೇತ್ರ ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ. ‌ಜನರು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಪರ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ಮೇ 7ರಂದು ನಡೆಯಲಿರುವ ಬೆಳಗಾವಿ, ಕೆನರಾ ಲೋಕಸಭಾ ಚುಣಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ನಾವೆಲ್ಲರು ಕಷ್ಟಪಟ್ಟು ಶ್ರಮಿಸಬೇಕು ಎಂದರು.

ಜೆಡಿಎಸ್ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ, ಬಿಜೆಪಿ ಮಂಡಳ ಅಧ್ಯಕ್ಷ ಗುರುಪಾದ ಕಳ್ಳಿ, ಚನ್ನಮ್ಮನ ಕಿತ್ತೂರು ಜೆಡಿಎಸ್ ಮಂಡಲ ಅಧ್ಯಕ್ ಎಂ.ವಾಯ್.ಸೋಮಣ್ಣವರ, ಬಿಜೆಪಿ ಗ್ರಾಮಾಂತರ ಉಪಾಧ್ಯಕ್ಷ ಗುರು ಮೆಟಗುಡ್ಡ, ಮಂಡಳ ಉಪಾಧ್ಯಕ್ಷ ಸುಭಾಷ ತುರಮರಿ, ಬಿಜೆಪಿ ಮುಖಂಡ ಶ್ರೀಶೈಲ ಯಡಳ್ಳಿ, ಜೆಡಿಎಸ್ ಮುಖಂಡ ಸುಭಾಷ ಬಾಗೇವಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT