ವಿನಾಯಕ ಅವರ ಮನೆ ಮಳೆಯಿಂದಾಗಿ ಸೋರುತ್ತಿತ್ತು. ಈಗಾಗಲೇ ಇದ್ದ ತಗಡಿನ ಚಾವಣಿ ಮೇಲೆ ಹೊಸ ತಗಡುಗಳನ್ನು ಹಾಕಲು ವಿನಾಯಕ ಹಾಗೂ ವಿಲಾಸ ಚಾವಣಿ ಮೇಲೆ ಹತ್ತಿದ್ದರು. ಇವರಿಗೆ ಇನ್ನೊಬ್ಬ ಯುವಕ ನೆರವಾಗಿದ್ದರು. ಮನೆ ಮೇಲೆ ಹಾದು ಹೋದ ವಿದ್ಯುತ್ ತಂತಿಗೆ ತಗಡು ಸಿಕ್ಕಿಕೊಂಡಿದ್ದರಿಂದ ಅದರ ಮೂಲಕ ವಿದ್ಯುತ್ ಪ್ರವಹಿಸಿ, ಇಬ್ಬರೂ ಕ್ಷಣ ಮಾತ್ರದಲ್ಲೇ ಮೃತಪಟ್ಟರು. ನೆರವಿಗೆ ಬಂದಿದ್ದ ಇನ್ನೊಬ್ಬ ವ್ಯಕ್ತಿಗೂ ವಿದ್ಯುತ್ ತಂತಿ ತಗಲಿದ್ದರಿಂದ ಕೆಳಗೆ ಬಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
*
ಕೊಲೆ: ಆರು ಆರೋಪಿಗಳ ವಿರುದ್ಧ ದೂರು