ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಂದಗಡ- ಬೀಡಿ ರಸ್ತೆಯ (ಬೆಳಗಾವಿ- ತಾಳಗುಪ್ಪ ರಾಜ್ಯ ಹೆದ್ದಾರಿ) ಬೇಕವಾಡ ಕ್ರಾಸ್ ಬಳಿ ಶನಿವಾರ ಮಧ್ಯಾಹ್ನ ಒಂಟಿಸಲಗ ಕಾಣಿಸಿಕೊಂಡಿತು.
ಆನೆ ಜುಂಜವಾಡ- ಬೇಕವಾಡ ಮಧ್ಯದಲ್ಲಿ ರಸ್ತೆ ದಾಟಿ ಜುಂಜವಾಡ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಗಳಲ್ಲಿ ನುಗ್ಗಿದೆ.
ಆನೆ ಕಂಡು ಜನ ಅದರ ಫೋಟೊ, ವಿಡಿಯೊ ಮಾಡಿಕೊಳ್ಳಲು ಮುಂದಾದರು. ಇದರಿಂದ ಸ್ಥಳದಲ್ಲಿ ಜನಜಂಗುಳಿ ಏರ್ಪಟ್ಟಿತು.
ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಜನರನ್ನು ನಿಯಂತ್ರಿಸಿದರು. ಆನೆಯನ್ನು ಕಾಡಿಗಟ್ಟಲು ಕಾರ್ಯಾಚರಣೆ ಶುರು ಮಾಡಿದರು.