‘ಮಹಾರಾಷ್ಟ್ರ, ಗೋವಾ, ಗುಜರಾತ್, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಿಂದ ಜಿಲ್ಲೆಗೆ ಸಾವಿರಾರು ಕಾರ್ಮಿಕರು ವಾಪಸಾಗಿದ್ದಾರೆ. ಅವರಲ್ಲಿ ಹಲವರು ಸದ್ಯಕ್ಕೆ ಮತ್ತೆ ಹೋಗುವ ಸಾಧ್ಯತೆ ಕಡಿಮೆ. ಹೀಗಾಗಿ, ಅವರ ವಿದ್ಯಾರ್ಹತೆ, ಕೌಶಲ, ಅನುಭವ ಮೊದಲಾದ ಮಾಹಿತಿಯನ್ನು ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮಾಡಲಾಗುತ್ತಿದೆ. ಈವರೆಗೆ 22ರಿಂದ 40 ವರ್ಷದ 10,080 ಮಂದಿಯನ್ನು ಗುರುತಿಸಿದ್ದೇವೆ. ಇದಕ್ಕಿಂತ ಜಾಸ್ತಿ ವಯಸ್ಸಾದವರನ್ನು ಪರಿಗಣಿಸಿಲ್ಲ. ಇವರ ಪಟ್ಟಿಯನ್ನು ಕೈಗಾರಿಕೋದ್ಯಮಿಗಳೊಂದಿಗೆ ಹಂಚಿಕೊಂಡಿದ್ದೇವೆ. ಅವರು ಅಗತ್ಯವಿರುವ ಕಾರ್ಮಿಕರನ್ನು ನೇಮಿಸಿಕೊಳ್ಳಬಹುದು. ಇದರಿಂದ ಕೊರತೆ ನೀಗಲಿದೆ’ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.