ಮೂಡಲಗಿ: ‘ಕರ್ನಾಟಕದಲ್ಲಿ 50 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿದ ಉಪ್ಪಾರ ಸಮುದಾಯವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಈ ಸಮಾಜಕ್ಕೆ ಯಾವುದೇ ರಾಜಕೀಯ ಪಕ್ಷಗಳು ಅಥವಾ ಸರ್ಕಾರವು ರಾಜಕೀಯ ಅಧಿಕಾರ ನೀಡಿ, ಮುಂಚೂಣಿಗೆ ತರುವ ಪ್ರಯತ್ನ ಮಾಡಿಲ್ಲ. ಈಗಿನ ಕಾಂಗ್ರೆಸ್ ಸರ್ಕಾರ ಉಪ್ಪಾರ ಸಮಾಜಕ್ಕೆ ರಾಜಕೀಯ ಸ್ಥಾನ ಮಾನ ನೀಡಿ ಮುನ್ನೆಲೆಗೆ ತರಬೇಕು’ ಎಂದು ಕರ್ನಾಟಕ ಉಪ್ಪಾರ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ವಿಷ್ಣು ಲಾತೂರ, ಉಪಾಧ್ಯಕ್ಷ ಅರುಣ ಸವತಿಕಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.