ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಇಲ್ಲಿನ ನೆಹರೂ ನಗರದ ಕನ್ನಡ ಭವನದಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವವನ್ನು ಸರಳವಾಗಿ ಸೋಮವಾರ ಆಚರಿಸಲಾಯಿತು.
ವಕೀಲ ರಾಜು ಬಾಗೇವಾಡಿ ಕನ್ನಡ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
ನಿವೃತ್ತ ಶಿಕ್ಷಕ ಸಿ.ಎಂ.ಬೂದಿಹಾಳ, ‘ಕನ್ನಡವನ್ನು ಬಳಸುವುದರ ಮೂಲಕ, ಉಳಿಸಿ ಬೆಳೆಸಬೇಕು’ ಎಂದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷೆ ಮಂಗಲಾ ಮಟಗುಡ್ಡ, ‘ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣದ ಪಠ್ಯಪುಸ್ತಕಗಳನ್ನು ಕನ್ನಡದಲ್ಲಿ ಬರೆದು, ಕನ್ನಡ ನಾಡಿನ ಮಕ್ಕಳಿಗೆ ಕನ್ನಡದಲ್ಲಿಯೇ ಕಲಿಯಲು ಅವಕಾಶ ಮಾಡಿಕೊಡಬೇಕು’ ಎಂದು ಹೇಳಿದರು.