<p><strong>ಬೆಳಗಾವಿ</strong>: ‘ಭಾರತೀಯ ಹಬ್ಬಗಳು ಪರಿಸರವನ್ನು ಪೂಜಿಸಿ, ಅದರ ಪ್ರಾಮುಖ್ಯತೆಯನ್ನು ಜನಸಾಮಾನ್ಯರಿಗೆ ತಿಳಿಸುತ್ತ ಬಂದಿವೆ. ಮಣ್ಣು, ನೀರು, ಗಾಳಿಯಲ್ಲಿ ದೈವ ಕಾಣುವ ಕಾಣುವ ಭಾರತೀಯ ಹಬ್ಬಗಳ ಮೂಲ ಆಶಯವೇ ಪರಿಸರ ಸಂರಕ್ಷಣೆ’ ಎಂದು ಪ್ರಾಧ್ಯಾಪಕ ಮಂಜುನಾಥ ಶರಣಪ್ಪನವರ ಹೇಳಿದರು.</p>.<p>ಇಲ್ಲಿನ ಶಿವಬಸವ ನಗರದ ಸಿದ್ಧರಾಮೇಶ್ವರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಅಟಲ್ ಟಿಂಕರಿಂಗ್ ಲ್ಯಾಬ್ನಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಡಾ. ಸ.ಜ.ನಾಗಲೋಟಿಮಠ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಪರಿಸರ ಸ್ನೇಹಿ ಗಣೇಶೋತ್ಸವದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಶೋಭಾ ಪೋಳ, ‘ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ಗಣೇಶನ ಮೂರ್ತಿಗಳ ಬಳಕೆ, ಮಾರಾಟವನ್ನು ಸರ್ಕಾರ ನಿಷೇಧಿಸಿದೆ. ಸಾರ್ವಜನಿಕರು ಅಂಥ ಮೂರ್ತಿ ಬಳಸಬಾರದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಉಪಪ್ರಾಚಾರ್ಯೆ ಮಾತನಾಡಿದರು. ಜಿ.ಎಂ.ಪಾಟೀಲ ಉಪಸ್ಥಿತರಿದ್ದರು. ವಿಜ್ಞಾನ ಕೇಂದ್ರದ ಯೋಜನಾಧಿಕಾರಿ ರಾಜಶೇಖರ ಪಾಟೀಲ ಸ್ವಾಗತಿಸಿದರು. ಮನೋಹರ ಉಳ್ಳೇಗಡ್ಡಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಭಾರತೀಯ ಹಬ್ಬಗಳು ಪರಿಸರವನ್ನು ಪೂಜಿಸಿ, ಅದರ ಪ್ರಾಮುಖ್ಯತೆಯನ್ನು ಜನಸಾಮಾನ್ಯರಿಗೆ ತಿಳಿಸುತ್ತ ಬಂದಿವೆ. ಮಣ್ಣು, ನೀರು, ಗಾಳಿಯಲ್ಲಿ ದೈವ ಕಾಣುವ ಕಾಣುವ ಭಾರತೀಯ ಹಬ್ಬಗಳ ಮೂಲ ಆಶಯವೇ ಪರಿಸರ ಸಂರಕ್ಷಣೆ’ ಎಂದು ಪ್ರಾಧ್ಯಾಪಕ ಮಂಜುನಾಥ ಶರಣಪ್ಪನವರ ಹೇಳಿದರು.</p>.<p>ಇಲ್ಲಿನ ಶಿವಬಸವ ನಗರದ ಸಿದ್ಧರಾಮೇಶ್ವರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಅಟಲ್ ಟಿಂಕರಿಂಗ್ ಲ್ಯಾಬ್ನಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಡಾ. ಸ.ಜ.ನಾಗಲೋಟಿಮಠ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಪರಿಸರ ಸ್ನೇಹಿ ಗಣೇಶೋತ್ಸವದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಶೋಭಾ ಪೋಳ, ‘ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ಗಣೇಶನ ಮೂರ್ತಿಗಳ ಬಳಕೆ, ಮಾರಾಟವನ್ನು ಸರ್ಕಾರ ನಿಷೇಧಿಸಿದೆ. ಸಾರ್ವಜನಿಕರು ಅಂಥ ಮೂರ್ತಿ ಬಳಸಬಾರದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಉಪಪ್ರಾಚಾರ್ಯೆ ಮಾತನಾಡಿದರು. ಜಿ.ಎಂ.ಪಾಟೀಲ ಉಪಸ್ಥಿತರಿದ್ದರು. ವಿಜ್ಞಾನ ಕೇಂದ್ರದ ಯೋಜನಾಧಿಕಾರಿ ರಾಜಶೇಖರ ಪಾಟೀಲ ಸ್ವಾಗತಿಸಿದರು. ಮನೋಹರ ಉಳ್ಳೇಗಡ್ಡಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>