ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಇಲ್ಲಿ ಬುಧವಾರ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನವರು ಈಶ್ವರಪ್ಪ ಅವರ ಮೇಲೆ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದುದು. ಕಾಮಗಾರಿಗೆ ತನ್ನದೆ ಆದ ಪ್ರಕ್ರಿಯೆ ಇದೆ. ಟೆಂಡರ್ ಆಗಬೇಕು. ಜಾಹೀರಾತು ನೀಡಬೇಕು. ಸರ್ಕಾರದಿಂದ ಕಾರ್ಯಾದೇಶ ಆಗಬೇಕು ಹೀಗೆ... ಹಲವು ಪ್ರಕ್ರಿಯೆಗಳಿವೆ. ಈ ಪ್ರಕರಣದಲ್ಲಿ ಇದ್ಯಾವುದೂ ನಡೆದೇ ಇಲ್ಲ. ಕಾಂಗ್ರೆಸ್ಸಿನವರು ಈಶ್ವರಪ್ಪ ಮೇಲೆ ಮಾಡುತ್ತಿರುವ ಆಪಾದನೆ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದರು.