ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವದತ್ತಿ: ದೇವಿಯರ ಮೂರ್ತಿ ಪ್ರತಿಷ್ಠಾಪನೆ

Last Updated 25 ಮಾರ್ಚ್ 2023, 5:34 IST
ಅಕ್ಷರ ಗಾತ್ರ

ಸವದತ್ತಿ: ಇಲ್ಲಿನ ಗುರ್ಲಹೊಸೂರಿನ ದುರ್ಗಾದೇವಿ, ಮರಗಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ದೇವರ ಮೂರ್ತಿಗಳ ಮೆರವಣಿಗೆ ಸಂಭ್ರಮದಿಂದ ಜರುಗಿತು.

ಎಪಿಎಂಸಿ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಗುರ್ಲಹೊಸೂರಿನ ದೇವಸ್ಥಾನದತ್ತ ಸಾಗಿತು. ಮಹಿಳೆಯರ ಕುಂಭಮೇಳ ಮಹಿಳೆಯರು, ಜಗ್ಗಲಿಗೆ ಮೇಳ ಜೊತೆಯಾದವು. ಯುವಕರು, ಹಿರಿಯರು ಮೆರವಣಿಗೆಯುದ್ದಕ್ಕೂ ಭಂಡಾರ ಎರಚಿ ಹೊನ್ನಾಟ ಸಂಪನ್ನಗೊಳಿಸಿದರು.

ಗುರ್ಲಹೊಸೂರಿನ ಚರಮೂರ್ತೇಶ್ವರ ಮಠದ ಶಿವಾನಂದ ಶ್ರೀ ಹಾಗೂ ನಾಡಿನ ಪ್ರಮುಖ ಮಠಾಧೀಶರ ಸಾನ್ನಿಧ್ಯದಲ್ಲಿ ಧಾನ್ಯ ಸ್ಥಂಬನ, ಕಾಂಚಾನ ಸ್ಥಂಬನ, ಜಲಸ್ಥಂಬನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.ಯಲ್ಲಪ್ಪ ಗೊರವನಕೊಳ್ಳ, ಮಹಾದೇವ ಬಡ್ಲಿ, ಶ್ರೀಧರ ಆಸಂಗಿಹಾಳ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT