<p><strong>ಬೆಳಗಾವಿ:</strong> ‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಡುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು ಎಂಬಂತೆ ಸತ್ಯಾಸತ್ಯತೆ ಪರಾಮರ್ಶಿಸಿದ ಬಳಿಕವೇ ಮಾಧ್ಯಮದಲ್ಲಿ ಪ್ರಕಟಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪತ್ರಕರ್ತರಿಗೆ ಏರ್ಪಡಿಸಿದ್ದ ‘ಫ್ಯಾಕ್ಟ್ ಚೆಕ್’ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>‘ವೈರಲ್ ಆಗುವ ಸುಳ್ಳು ಸುದ್ದಿಗಳ ಪೋಸ್ಟ್ಗಳಿಂದ ಕೆಲವೊಮ್ಮೆ ಜನರಲ್ಲಿ ಆತಂಕ ಉಂಟಾಗುತ್ತದೆ. ಆದ್ದರಿಂದ ಇಂತಹ ಸುದ್ದಿಗಳು ಬಂದಾಗ ಪರಿಶೀಲಿಸುವ ಮೂಲಕ ಜನರಿಗೆ ಸರಿಯಾದ ಮಾಹಿತಿಯನ್ನು ನೀಡುವ ಕೆಲಸವನ್ನು ಪತ್ರಕರ್ತರು ಮಾಡಬೇಕು’ ಎಂದರು.</p>.<p>‘ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವ ಸುಳ್ಳು ಸುದ್ದಿ ಹರಡುವವರನ್ನು ಗುರುತಿಸಿ ಶಿಕ್ಷಿಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ‘ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಸುದ್ದಿಗಳ ಸತ್ಯಾಸತ್ಯತೆ ಪತ್ತೆಹಚ್ಚುವ ವಿಧಾನಗಳನ್ನು ಪತ್ರಕರ್ತರಿಗೆ ತಿಳಿಸುವ ಉದ್ದೇಶದಿಂದ ತರಬೇತಿ ಆಯೋಜಿಸಲಾಗಿದೆ’ ಎಂದರು.</p>.<p>‘ಗೂಗಲ್’ನಿಂದ ತರಬೇತಿ ಪಡೆದಿರುವ ಪತ್ರಕರ್ತ ಪ್ರಮೋದ್ ಹರಿಕಾಂತ ಪ್ರಾತ್ಯಕ್ಷಿಕೆ ಮೂಲಕ ‘ಫ್ಯಾಕ್ಟ್ ಚೆಕ್’ ಕುರಿತು ಮಾತನಾಡಿದರು.</p>.<p>ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ 30 ಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಡುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು ಎಂಬಂತೆ ಸತ್ಯಾಸತ್ಯತೆ ಪರಾಮರ್ಶಿಸಿದ ಬಳಿಕವೇ ಮಾಧ್ಯಮದಲ್ಲಿ ಪ್ರಕಟಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪತ್ರಕರ್ತರಿಗೆ ಏರ್ಪಡಿಸಿದ್ದ ‘ಫ್ಯಾಕ್ಟ್ ಚೆಕ್’ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>‘ವೈರಲ್ ಆಗುವ ಸುಳ್ಳು ಸುದ್ದಿಗಳ ಪೋಸ್ಟ್ಗಳಿಂದ ಕೆಲವೊಮ್ಮೆ ಜನರಲ್ಲಿ ಆತಂಕ ಉಂಟಾಗುತ್ತದೆ. ಆದ್ದರಿಂದ ಇಂತಹ ಸುದ್ದಿಗಳು ಬಂದಾಗ ಪರಿಶೀಲಿಸುವ ಮೂಲಕ ಜನರಿಗೆ ಸರಿಯಾದ ಮಾಹಿತಿಯನ್ನು ನೀಡುವ ಕೆಲಸವನ್ನು ಪತ್ರಕರ್ತರು ಮಾಡಬೇಕು’ ಎಂದರು.</p>.<p>‘ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವ ಸುಳ್ಳು ಸುದ್ದಿ ಹರಡುವವರನ್ನು ಗುರುತಿಸಿ ಶಿಕ್ಷಿಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ‘ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಸುದ್ದಿಗಳ ಸತ್ಯಾಸತ್ಯತೆ ಪತ್ತೆಹಚ್ಚುವ ವಿಧಾನಗಳನ್ನು ಪತ್ರಕರ್ತರಿಗೆ ತಿಳಿಸುವ ಉದ್ದೇಶದಿಂದ ತರಬೇತಿ ಆಯೋಜಿಸಲಾಗಿದೆ’ ಎಂದರು.</p>.<p>‘ಗೂಗಲ್’ನಿಂದ ತರಬೇತಿ ಪಡೆದಿರುವ ಪತ್ರಕರ್ತ ಪ್ರಮೋದ್ ಹರಿಕಾಂತ ಪ್ರಾತ್ಯಕ್ಷಿಕೆ ಮೂಲಕ ‘ಫ್ಯಾಕ್ಟ್ ಚೆಕ್’ ಕುರಿತು ಮಾತನಾಡಿದರು.</p>.<p>ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ 30 ಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>