<p><strong>ಬೆಳಗಾವಿ:</strong> ತಾನು ವೈದ್ಯ ವಿದ್ಯಾರ್ಥಿನಿ ಎಂದು ಹೇಳಿಕೊಂಡು ಯುವತಿಯೊಬ್ಬರು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ.</p>.<p>ಕಾರವಾರ ಮೂಲದ ಸನಾ ಶೇಖ್ ಈ ಕೃತ್ಯ ಎಸಗಿದವರು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಈ ಯುವತಿ, ಕುಮಾರಸ್ವಾಮಿ ಬಡಾವಣೆಯಲ್ಲಿ ವಾಸವಾಗಿದ್ದಾರೆ. ವೈದ್ಯರ ವೇಷ ಹಾಕಿಕೊಂಡು ಪ್ರತಿ ದಿನ ಜಿಲ್ಲಾಸ್ಪತ್ರೆಗೆ ಬರುತ್ತಿದ್ದರು. ಕಳೆದ ಎರಡು ತಿಂಗಳಿಂದ ಆಸ್ಪತ್ರೆಯ ವಿವಿಧ ವಾರ್ಡ್ಗಳಿಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದರು ಎಂದು ಮೂಲಗಳು ಹೇಳಿವೆ.</p>.<p>ಆಸ್ಪತ್ರೆಯ ಇತರ ಸಿಬ್ಬಂದಿ ಸನಾ ಅವರನ್ನು ಪ್ರಶ್ನಿಸಿದಾಗ ತಾನು ವೈದ್ಯಕೀಯ ನಿರ್ದೇಶಕರ ಪರಿಚಯಸ್ಥೆ ಎಂದು ಹೇಳಿ ಸಾಗಹಾಕಿದ್ದರು. ಶುಕ್ರವಾರ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ವಿಚಾರಣೆ ಮಾಡಿದಾಗ ಅವರ ಬಣ್ಣ ಬಯಲಾಗಿದೆ. ಜಿಲ್ಲಾಸ್ಪತ್ರೆಯ ವಿಭಾಗವೊಂದರ ಮುಖ್ಯಸ್ಥರೇ ಸನಾ ಅವರಿಗೆ ಈ ಅವಕಾಶ ಮಾಡಿ ಕೊಟ್ಟಿದ್ದಾರೆ ಎಂದೂ ಮೂಲಗಳು ಮಾಹಿತಿ ನೀಡಿವೆ.</p>.<p>ಈ ಬಗ್ಗೆ ಕ್ರಮ ಕೈಗೊಂಡ ಬಿಮ್ಸ್ ನಿರ್ದೇಶಕ ಡಾ.ಅಶೋಕ ಶೆಟ್ಟಿ ಮೂವರು ವೈದ್ಯರ ತಂಡ ರಚಿಸಿದ್ದಾರೆ. ಡಾ.ಈರಣ್ಣ ಪಲ್ಲೇದ, ಡಾ.ಎಚ್.ಬಿ.ಕೇಶವ್, ಡಾ.ವಸಂತ ಕಬ್ಬೂರ ನೇತೃತ್ವದಲ್ಲಿ ತನಿಖೆಗೆ ನಡೆಸಿ, ಒಂದು ವಾರದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾನು ವೈದ್ಯ ವಿದ್ಯಾರ್ಥಿನಿ ಎಂದು ಹೇಳಿಕೊಂಡು ಯುವತಿಯೊಬ್ಬರು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ.</p>.<p>ಕಾರವಾರ ಮೂಲದ ಸನಾ ಶೇಖ್ ಈ ಕೃತ್ಯ ಎಸಗಿದವರು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಈ ಯುವತಿ, ಕುಮಾರಸ್ವಾಮಿ ಬಡಾವಣೆಯಲ್ಲಿ ವಾಸವಾಗಿದ್ದಾರೆ. ವೈದ್ಯರ ವೇಷ ಹಾಕಿಕೊಂಡು ಪ್ರತಿ ದಿನ ಜಿಲ್ಲಾಸ್ಪತ್ರೆಗೆ ಬರುತ್ತಿದ್ದರು. ಕಳೆದ ಎರಡು ತಿಂಗಳಿಂದ ಆಸ್ಪತ್ರೆಯ ವಿವಿಧ ವಾರ್ಡ್ಗಳಿಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದರು ಎಂದು ಮೂಲಗಳು ಹೇಳಿವೆ.</p>.<p>ಆಸ್ಪತ್ರೆಯ ಇತರ ಸಿಬ್ಬಂದಿ ಸನಾ ಅವರನ್ನು ಪ್ರಶ್ನಿಸಿದಾಗ ತಾನು ವೈದ್ಯಕೀಯ ನಿರ್ದೇಶಕರ ಪರಿಚಯಸ್ಥೆ ಎಂದು ಹೇಳಿ ಸಾಗಹಾಕಿದ್ದರು. ಶುಕ್ರವಾರ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ವಿಚಾರಣೆ ಮಾಡಿದಾಗ ಅವರ ಬಣ್ಣ ಬಯಲಾಗಿದೆ. ಜಿಲ್ಲಾಸ್ಪತ್ರೆಯ ವಿಭಾಗವೊಂದರ ಮುಖ್ಯಸ್ಥರೇ ಸನಾ ಅವರಿಗೆ ಈ ಅವಕಾಶ ಮಾಡಿ ಕೊಟ್ಟಿದ್ದಾರೆ ಎಂದೂ ಮೂಲಗಳು ಮಾಹಿತಿ ನೀಡಿವೆ.</p>.<p>ಈ ಬಗ್ಗೆ ಕ್ರಮ ಕೈಗೊಂಡ ಬಿಮ್ಸ್ ನಿರ್ದೇಶಕ ಡಾ.ಅಶೋಕ ಶೆಟ್ಟಿ ಮೂವರು ವೈದ್ಯರ ತಂಡ ರಚಿಸಿದ್ದಾರೆ. ಡಾ.ಈರಣ್ಣ ಪಲ್ಲೇದ, ಡಾ.ಎಚ್.ಬಿ.ಕೇಶವ್, ಡಾ.ವಸಂತ ಕಬ್ಬೂರ ನೇತೃತ್ವದಲ್ಲಿ ತನಿಖೆಗೆ ನಡೆಸಿ, ಒಂದು ವಾರದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>