ಬೆಳಗಾವಿ: ಹಿರೇಬಾಗೇವಾಡಿಯ ಎಪಿಎಂಸಿ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಶನಿವಾರ ಪತ್ತೆಯಾಗಿತ್ತು. ‘ಈ ಯುವಕ ಗೋವುಗಳ ಅಕ್ರಮ ಸಾಗಣೆ ವಿರುದ್ಧ ದನಿ ಎತ್ತಿದ್ದ. ಹೀಗಾಗಿ, ಕೊಲೆ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದ ಇಬ್ಬರ ವಿರುದ್ಧ ಗೋಕಾಕ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಎಸ್ಪಿ ಸುಧೀರ್ಕುಮಾರ್ ರೆಡ್ಡಿ ತಿಳಿಸಿದ್ದಾರೆ.