ಅಥಣಿ: ‘ರಸ್ತೆ ಅಪಘಾತಗಳು ಸವಾರರು ಹಾಗೂ ಚಾಲಕರ ನಿರ್ಲಕ್ಷ್ಯದಿಂದ ಹೆಚ್ಚಾಗುತ್ತಿವೆಯೇ ಹೊರತು, ವಾಹನಗಳ ಸಮಸ್ಯೆಯಿಂದ ಸಂಭವಿಸುವುದಿಲ್ಲ’ ಎಂದು ಡಿವೈಎಸ್ಪಿ ಎಸ್.ವಿ. ಗಿರೀಶ ಹೇಳಿದರು.
ಇಲ್ಲಿನ ಕೆ.ಎ. ಲೋಕಾಪುರ ಪದವಿ ಕಾಲೇಜಿನಲ್ಲಿ ಅರ್ಥಶಾಸ್ತ್ರ ಹಾಗೂ ರಾಜ್ಯಶಾಸ್ತ್ರ ವಿಭಾಗದಿಂದ ನೂತನ ನಿಯಮಗಳ ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಯುವಕರು ಬೇಕಾಬಿಟ್ಟಿಯಾಗಿ ವಾಹನಗಳನ್ನು ಓಡಿಸುತ್ತಾರೆ. ಅವರಿಗೆ ಸಂಚಾರ ನಿಯಮಗಳ ಅರಿವಿಲ್ಲ. ಹೀಗಾಗಿ, ಅಪಘಾತಗಳು ಹೆಚ್ಚುತ್ತಿವೆ. ಇದನ್ನು ತಡೆಯುವುದಕ್ಕಾಗಿ ನಿಯಮಗಳನ್ನು ಪಾಲಿಸಬೇಕು. ದಂಡ ಕಟ್ಟುವುದನ್ನು ತಪ್ಪಿಸಿಕೊಳ್ಳುವುದಕ್ಕಾಗಿ ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ವಿಮೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.