<p><strong>ಚಿಕ್ಕೋಡಿ</strong>: ‘ಶಿಕ್ಷಣ ಕೇವಲ ಅಂಕ ಗಳಿಕೆ ಆಧರಿತ ಆಗಿರಬಾರದು. ಜ್ಞಾನದೊಂದಿಗೆ ಕೌಶಲ ವೃದ್ಧಿ ಮಾಡುವಂಥ ಶಿಕ್ಷಣ ನೀಡಿದರೆ ಮಕ್ಕಳ ಭವಿಷ್ಯ ಉಜ್ವಲವಾಗುವುದು’ ಎಂದು ಖಡಕಲಾಟ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಕೇಶ ಚಿಂಚಣಿ ಹೇಳಿದರು.</p>.<p>ತಾಲ್ಲೂಕಿನ ಕುಪ್ಪಾನವಾಡಿ ಗ್ರಾಮದಲ್ಲಿ ವಿಶ್ವ ಶಿಕ್ಷಣ ಸಂಸ್ಥೆಯ ಮುರುಘೇಂದ್ರ ವಸತಿ ಶಾಲೆಯ 2023-24ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಗಡಿ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಲ್ಲಿ ಮುರುಘೇಂದ್ರ ವಸತಿ ಶಾಲೆ ಯಶಸ್ವಿಯಾಗಿದೆ. ನಿಸರ್ಗದ ಮಧ್ಯದಲ್ಲಿರುವ ಈ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಇಲ್ಲಿ ಹೇಳಿ ಮಾಡಿಸಿದ ವಾತಾವರಣವಿದೆ’ ಎಂದರು.</p>.<p>ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ.ಪಿ.ಧರಿಗೌಡರ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ, ನವೋದಯ, ಸೈನಿಕ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಸಂಸ್ಥೆಯ ಸಂಚಾಲಕಿ ಕೆ.ಕೆ. ಧರಿಗೌಡರ, ಖಡಕಲಾಟ ಗ್ರಾ.ಪಂ ಉಪಾಧ್ಯಕ್ಷ ಕುಮಾರ ಪಾಟೀಲ, ಓಂ ಧರಿಗೌಡರ, ಅಂಕುಶ ಕೋಳಿ ಮುಂತಾದವರು ಇದ್ದರು.</p>.<p>ಎಂ.ಬಿ ಗಾವಡಿ ನಿರೂಪಿಸಿದರು. ಅಮೃತಾ ಖೋತ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ‘ಶಿಕ್ಷಣ ಕೇವಲ ಅಂಕ ಗಳಿಕೆ ಆಧರಿತ ಆಗಿರಬಾರದು. ಜ್ಞಾನದೊಂದಿಗೆ ಕೌಶಲ ವೃದ್ಧಿ ಮಾಡುವಂಥ ಶಿಕ್ಷಣ ನೀಡಿದರೆ ಮಕ್ಕಳ ಭವಿಷ್ಯ ಉಜ್ವಲವಾಗುವುದು’ ಎಂದು ಖಡಕಲಾಟ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಕೇಶ ಚಿಂಚಣಿ ಹೇಳಿದರು.</p>.<p>ತಾಲ್ಲೂಕಿನ ಕುಪ್ಪಾನವಾಡಿ ಗ್ರಾಮದಲ್ಲಿ ವಿಶ್ವ ಶಿಕ್ಷಣ ಸಂಸ್ಥೆಯ ಮುರುಘೇಂದ್ರ ವಸತಿ ಶಾಲೆಯ 2023-24ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಗಡಿ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಲ್ಲಿ ಮುರುಘೇಂದ್ರ ವಸತಿ ಶಾಲೆ ಯಶಸ್ವಿಯಾಗಿದೆ. ನಿಸರ್ಗದ ಮಧ್ಯದಲ್ಲಿರುವ ಈ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಇಲ್ಲಿ ಹೇಳಿ ಮಾಡಿಸಿದ ವಾತಾವರಣವಿದೆ’ ಎಂದರು.</p>.<p>ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ.ಪಿ.ಧರಿಗೌಡರ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ, ನವೋದಯ, ಸೈನಿಕ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಸಂಸ್ಥೆಯ ಸಂಚಾಲಕಿ ಕೆ.ಕೆ. ಧರಿಗೌಡರ, ಖಡಕಲಾಟ ಗ್ರಾ.ಪಂ ಉಪಾಧ್ಯಕ್ಷ ಕುಮಾರ ಪಾಟೀಲ, ಓಂ ಧರಿಗೌಡರ, ಅಂಕುಶ ಕೋಳಿ ಮುಂತಾದವರು ಇದ್ದರು.</p>.<p>ಎಂ.ಬಿ ಗಾವಡಿ ನಿರೂಪಿಸಿದರು. ಅಮೃತಾ ಖೋತ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>